ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಅಸ್ಸಾಂ ಗಡಿ ಭದ್ರತಾ ಪಡೆ ಕಾರ್ಯಾಚರಣೆ ಚುರುಕುಗೊಳಿಸಿದೆ. ಶುಕ್ರವಾರ ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಸುಮಾರು 6785 ಅಡಿಕೆ ಚೀಲವನ್ನು ವಶಕ್ಕೆ ತೆಗೆದುಕೊಂಡಿದೆ. ಈ ಅಡಿಕೆಯ ಮೌಲ್ಯ ಸುಮಾರು 46 ಕೋಟಿ ರೂಪಾಯಿ ಎಂದು ಅಸ್ಸಾಂ ರೈಫಲ್ಸ್ ತಿಳಿಸಿದೆ.
ಮಣಿಪುರದ ಕಾಮ್ಜಾಂಗ್ ಜಿಲ್ಲೆಯ ವಾಂಗ್ಲೀ ಗ್ರಾಮದ ಕೆಲವು ಪ್ರದೇಶದಲ್ಲಿ ಅಡಿಕೆ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಅಸ್ಸಾಂ ರೈಫಲ್ಸ್ ಶೋಧ ಕಾರ್ಯ ಆರಂಭ ಮಾಡಿತ್ತು. ವಾಂಗ್ಲೆ ಗ್ರಾಮ, ನಮ್ಲೀ ಗ್ರಾಮ ಮತ್ತು ನಮ್ಲೀ ಮಾರುಕಟ್ಟೆಯ ಸುತ್ತಮುತ್ತಲಿನ 13 ಮನೆಗಳಲ್ಲಿ ಸಂಪೂರ್ಣ ಶೋಧ ನಡೆಸಿದಾಗ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಉತ್ತರದ ಇತರ ಭಾಗಗಳಿಗೆ ಕಾಳಸಂತೆ ಮಾರಾಟಕ್ಕಾಗಿ ಬರ್ಮಾ ಅಡಿಕೆ ದಾಸ್ತಾನು ಆಗಿರುವುದು ಕಂಡುಬಂದಿತ್ತು. ಒಟ್ಟು 6,785 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕೂಡಾ ಇನ್ನೊಂದು ಅಡಿಕೆ ಸಾಗಾಟ ಪ್ರಕರಣವನ್ನು ಅಸ್ಸಾಂ ರೈಫಲ್ಸ್ ತಡೆ ಹಿಡಿದಿದೆ ಎಂದು UNI ವರದಿ ಮಾಡಿದೆ.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…