ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಅಸ್ಸಾಂ ಗಡಿ ಭದ್ರತಾ ಪಡೆ ಕಾರ್ಯಾಚರಣೆ ಚುರುಕುಗೊಳಿಸಿದೆ. ಶುಕ್ರವಾರ ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಸುಮಾರು 6785 ಅಡಿಕೆ ಚೀಲವನ್ನು ವಶಕ್ಕೆ ತೆಗೆದುಕೊಂಡಿದೆ. ಈ ಅಡಿಕೆಯ ಮೌಲ್ಯ ಸುಮಾರು 46 ಕೋಟಿ ರೂಪಾಯಿ ಎಂದು ಅಸ್ಸಾಂ ರೈಫಲ್ಸ್ ತಿಳಿಸಿದೆ.
ಮಣಿಪುರದ ಕಾಮ್ಜಾಂಗ್ ಜಿಲ್ಲೆಯ ವಾಂಗ್ಲೀ ಗ್ರಾಮದ ಕೆಲವು ಪ್ರದೇಶದಲ್ಲಿ ಅಡಿಕೆ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಅಸ್ಸಾಂ ರೈಫಲ್ಸ್ ಶೋಧ ಕಾರ್ಯ ಆರಂಭ ಮಾಡಿತ್ತು. ವಾಂಗ್ಲೆ ಗ್ರಾಮ, ನಮ್ಲೀ ಗ್ರಾಮ ಮತ್ತು ನಮ್ಲೀ ಮಾರುಕಟ್ಟೆಯ ಸುತ್ತಮುತ್ತಲಿನ 13 ಮನೆಗಳಲ್ಲಿ ಸಂಪೂರ್ಣ ಶೋಧ ನಡೆಸಿದಾಗ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಉತ್ತರದ ಇತರ ಭಾಗಗಳಿಗೆ ಕಾಳಸಂತೆ ಮಾರಾಟಕ್ಕಾಗಿ ಬರ್ಮಾ ಅಡಿಕೆ ದಾಸ್ತಾನು ಆಗಿರುವುದು ಕಂಡುಬಂದಿತ್ತು. ಒಟ್ಟು 6,785 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕೂಡಾ ಇನ್ನೊಂದು ಅಡಿಕೆ ಸಾಗಾಟ ಪ್ರಕರಣವನ್ನು ಅಸ್ಸಾಂ ರೈಫಲ್ಸ್ ತಡೆ ಹಿಡಿದಿದೆ ಎಂದು UNI ವರದಿ ಮಾಡಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…