ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಅಸ್ಸಾಂ ಗಡಿ ಭದ್ರತಾ ಪಡೆ ಕಾರ್ಯಾಚರಣೆ ಚುರುಕುಗೊಳಿಸಿದೆ. ಶುಕ್ರವಾರ ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಸುಮಾರು 6785 ಅಡಿಕೆ ಚೀಲವನ್ನು ವಶಕ್ಕೆ ತೆಗೆದುಕೊಂಡಿದೆ. ಈ ಅಡಿಕೆಯ ಮೌಲ್ಯ ಸುಮಾರು 46 ಕೋಟಿ ರೂಪಾಯಿ ಎಂದು ಅಸ್ಸಾಂ ರೈಫಲ್ಸ್ ತಿಳಿಸಿದೆ.
ಮಣಿಪುರದ ಕಾಮ್ಜಾಂಗ್ ಜಿಲ್ಲೆಯ ವಾಂಗ್ಲೀ ಗ್ರಾಮದ ಕೆಲವು ಪ್ರದೇಶದಲ್ಲಿ ಅಡಿಕೆ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಅಸ್ಸಾಂ ರೈಫಲ್ಸ್ ಶೋಧ ಕಾರ್ಯ ಆರಂಭ ಮಾಡಿತ್ತು. ವಾಂಗ್ಲೆ ಗ್ರಾಮ, ನಮ್ಲೀ ಗ್ರಾಮ ಮತ್ತು ನಮ್ಲೀ ಮಾರುಕಟ್ಟೆಯ ಸುತ್ತಮುತ್ತಲಿನ 13 ಮನೆಗಳಲ್ಲಿ ಸಂಪೂರ್ಣ ಶೋಧ ನಡೆಸಿದಾಗ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಉತ್ತರದ ಇತರ ಭಾಗಗಳಿಗೆ ಕಾಳಸಂತೆ ಮಾರಾಟಕ್ಕಾಗಿ ಬರ್ಮಾ ಅಡಿಕೆ ದಾಸ್ತಾನು ಆಗಿರುವುದು ಕಂಡುಬಂದಿತ್ತು. ಒಟ್ಟು 6,785 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕೂಡಾ ಇನ್ನೊಂದು ಅಡಿಕೆ ಸಾಗಾಟ ಪ್ರಕರಣವನ್ನು ಅಸ್ಸಾಂ ರೈಫಲ್ಸ್ ತಡೆ ಹಿಡಿದಿದೆ ಎಂದು UNI ವರದಿ ಮಾಡಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…