ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಅಸ್ಸಾಂ ಗಡಿ ಭದ್ರತಾ ಪಡೆ ಕಾರ್ಯಾಚರಣೆ ಚುರುಕುಗೊಳಿಸಿದೆ. ಶುಕ್ರವಾರ ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಸುಮಾರು 6785 ಅಡಿಕೆ ಚೀಲವನ್ನು ವಶಕ್ಕೆ ತೆಗೆದುಕೊಂಡಿದೆ. ಈ ಅಡಿಕೆಯ ಮೌಲ್ಯ ಸುಮಾರು 46 ಕೋಟಿ ರೂಪಾಯಿ ಎಂದು ಅಸ್ಸಾಂ ರೈಫಲ್ಸ್ ತಿಳಿಸಿದೆ.
ಮಣಿಪುರದ ಕಾಮ್ಜಾಂಗ್ ಜಿಲ್ಲೆಯ ವಾಂಗ್ಲೀ ಗ್ರಾಮದ ಕೆಲವು ಪ್ರದೇಶದಲ್ಲಿ ಅಡಿಕೆ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಅಸ್ಸಾಂ ರೈಫಲ್ಸ್ ಶೋಧ ಕಾರ್ಯ ಆರಂಭ ಮಾಡಿತ್ತು. ವಾಂಗ್ಲೆ ಗ್ರಾಮ, ನಮ್ಲೀ ಗ್ರಾಮ ಮತ್ತು ನಮ್ಲೀ ಮಾರುಕಟ್ಟೆಯ ಸುತ್ತಮುತ್ತಲಿನ 13 ಮನೆಗಳಲ್ಲಿ ಸಂಪೂರ್ಣ ಶೋಧ ನಡೆಸಿದಾಗ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಉತ್ತರದ ಇತರ ಭಾಗಗಳಿಗೆ ಕಾಳಸಂತೆ ಮಾರಾಟಕ್ಕಾಗಿ ಬರ್ಮಾ ಅಡಿಕೆ ದಾಸ್ತಾನು ಆಗಿರುವುದು ಕಂಡುಬಂದಿತ್ತು. ಒಟ್ಟು 6,785 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕೂಡಾ ಇನ್ನೊಂದು ಅಡಿಕೆ ಸಾಗಾಟ ಪ್ರಕರಣವನ್ನು ಅಸ್ಸಾಂ ರೈಫಲ್ಸ್ ತಡೆ ಹಿಡಿದಿದೆ ಎಂದು UNI ವರದಿ ಮಾಡಿದೆ.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…