#Arecanut | ಮಣಿಪುರದಲ್ಲಿ ಬೃಹತ್‌ ಪ್ರಮಾಣದ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | 10.84 ಕೋಟಿ ರೂಪಾಯಿ ಮೌಲ್ಯದ 958 ಚೀಲ ಅಡಿಕೆ ವಶ |

September 6, 2023
4:31 PM
10.84 ಕೋಟಿ ಮೌಲ್ಯದ 958 ಚೀಲಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.

ಮ್ಯಾನ್ಮಾರ್‌ನಿಂದ ಅಕ್ರಮವಾಗಿ  ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್‌ ಪತ್ತೆ ಮಾಡಿದೆ. 10.84 ಕೋಟಿ ಮೌಲ್ಯದ 958 ಚೀಲಗಳ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Advertisement

ಕಳೆದ ಕೆಲವು ಸಮಯಗಳಿಂದ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿದೆ. ಮ್ಯಾನ್ಮಾರ್‌ ಅಡಿಕೆಯನ್ನು ಮಣಿಪುರ, ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಸಾಗಾಟ ಮಾಡಲಾಗುತ್ತಿತ್ತು. ಇದೀಗ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಸ್ಸಾಂ ರೈಫಲ್ಸ್‌ ಪಡೆ  ಕಾಮ್‌ಜಾಂಗ್ ಜಿಲ್ಲೆಯ ಇಂಡೋ-ಮ್ಯಾನ್ಮಾರ್ ಅಂತರಾಷ್ಟ್ರೀಯ ಗಡಿಯ  ಪ್ರದೇಶದಲ್ಲಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾಗ ಸುಮಾರು 17 ವಾಹನಗಳಲ್ಲಿ ಪತ್ತೆಯಾಗಿತ್ತು. ಮಣಿಪುರ ಮತ್ತು ಮ್ಯಾನ್ಮಾರ್ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ಟ್ರಕ್‌ಗಳ ಮೂಲಕ ಸಾಗಾಟ ಮಾಡಲಾಗುತ್ತಿತ್ತು.ಅಕ್ರಮ ವ್ಯಾಪಾರಕ್ಕೆ ಸಂಬಂಧಿಸಿದಂತೆ  ಹಲವರನ್ನು ಬಂಧಿಸಿದೆ.

ಈ ವರ್ಷದ ಆಗಸ್ಟ್‌ನಲ್ಲಿ, ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿ ಸುಮಾರು 4.84 ಕೋಟಿ ರೂ.ಗೂ ಹೆಚ್ಚು  ಬರ್ಮಾ ಅಡಿಕೆಗಳನ್ನು ವಶಪಡಿಸಿಕೊಂಡಿದ್ದರು. ಕಳ್ಳಸಾಗಣೆ ಮಾಡಲಾದ ಅಡಿಕೆಗಳನ್ನು ಮೊದಲು ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ಟ್ರಕ್‌ಗಳಲ್ಲಿ ತರಲಾಗುತ್ತದೆ. ನಂತರ ನಾಗಾಲ್ಯಾಂಡ್‌ನ ದಿಮಾಪುರ್ ಅಥವಾ ಅಸ್ಸಾಂಗೆ ಸಾಗಿಸಲಾಗುತ್ತದೆ. ಬಳಿಕ ದೇಶದ ಇತರ ಭಾಗಗಳಿಗೆ ರವಾನೆಯಾಗುತ್ತದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |
May 6, 2025
7:18 AM
by: ದ ರೂರಲ್ ಮಿರರ್.ಕಾಂ
ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ
May 6, 2025
7:02 AM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group