#Arecanut | ಮಣಿಪುರದಲ್ಲಿ ಬೃಹತ್‌ ಪ್ರಮಾಣದ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | 10.84 ಕೋಟಿ ರೂಪಾಯಿ ಮೌಲ್ಯದ 958 ಚೀಲ ಅಡಿಕೆ ವಶ |

September 6, 2023
4:31 PM
10.84 ಕೋಟಿ ಮೌಲ್ಯದ 958 ಚೀಲಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.

ಮ್ಯಾನ್ಮಾರ್‌ನಿಂದ ಅಕ್ರಮವಾಗಿ  ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್‌ ಪತ್ತೆ ಮಾಡಿದೆ. 10.84 ಕೋಟಿ ಮೌಲ್ಯದ 958 ಚೀಲಗಳ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Advertisement
Advertisement

ಕಳೆದ ಕೆಲವು ಸಮಯಗಳಿಂದ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿದೆ. ಮ್ಯಾನ್ಮಾರ್‌ ಅಡಿಕೆಯನ್ನು ಮಣಿಪುರ, ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಸಾಗಾಟ ಮಾಡಲಾಗುತ್ತಿತ್ತು. ಇದೀಗ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಸ್ಸಾಂ ರೈಫಲ್ಸ್‌ ಪಡೆ  ಕಾಮ್‌ಜಾಂಗ್ ಜಿಲ್ಲೆಯ ಇಂಡೋ-ಮ್ಯಾನ್ಮಾರ್ ಅಂತರಾಷ್ಟ್ರೀಯ ಗಡಿಯ  ಪ್ರದೇಶದಲ್ಲಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾಗ ಸುಮಾರು 17 ವಾಹನಗಳಲ್ಲಿ ಪತ್ತೆಯಾಗಿತ್ತು. ಮಣಿಪುರ ಮತ್ತು ಮ್ಯಾನ್ಮಾರ್ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ಟ್ರಕ್‌ಗಳ ಮೂಲಕ ಸಾಗಾಟ ಮಾಡಲಾಗುತ್ತಿತ್ತು.ಅಕ್ರಮ ವ್ಯಾಪಾರಕ್ಕೆ ಸಂಬಂಧಿಸಿದಂತೆ  ಹಲವರನ್ನು ಬಂಧಿಸಿದೆ.

Advertisement

ಈ ವರ್ಷದ ಆಗಸ್ಟ್‌ನಲ್ಲಿ, ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿ ಸುಮಾರು 4.84 ಕೋಟಿ ರೂ.ಗೂ ಹೆಚ್ಚು  ಬರ್ಮಾ ಅಡಿಕೆಗಳನ್ನು ವಶಪಡಿಸಿಕೊಂಡಿದ್ದರು. ಕಳ್ಳಸಾಗಣೆ ಮಾಡಲಾದ ಅಡಿಕೆಗಳನ್ನು ಮೊದಲು ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ಟ್ರಕ್‌ಗಳಲ್ಲಿ ತರಲಾಗುತ್ತದೆ. ನಂತರ ನಾಗಾಲ್ಯಾಂಡ್‌ನ ದಿಮಾಪುರ್ ಅಥವಾ ಅಸ್ಸಾಂಗೆ ಸಾಗಿಸಲಾಗುತ್ತದೆ. ಬಳಿಕ ದೇಶದ ಇತರ ಭಾಗಗಳಿಗೆ ರವಾನೆಯಾಗುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಕೃಷಿ ವಿಜ್ಞಾನ ಕೇಂದ್ರಗಳಿಗೆ 50 ವರ್ಷ | ದಾವಣಗೆರೆಯಲ್ಲಿ ಸಸ್ಯ ಸಂತೆ ಆಯೋಜನೆ
September 29, 2024
10:21 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29.09.2024 | ಮುಂದಿನ 10 ದಿನಗಳ ಕಾಲ ಗುಡುಗು ಸಹಿತ ಮಳೆ ನಿರೀಕ್ಷೆ
September 29, 2024
12:28 PM
by: ಸಾಯಿಶೇಖರ್ ಕರಿಕಳ
ಹೊಸ ಪೀಳಿಗೆಯ ನುರಿತ ಕೃಷಿ ವೃತ್ತಿಪರರಿಗೆ ಶಿಕ್ಷಣ | ಕೃಷಿ ಅಭಿವೃದ್ಧಿ ಕಡೆಗೆ ಕೃಷಿ ವಿಶ್ವವಿದ್ಯಾನಿಲಯಗಳ ಕೆಲಸ |
September 29, 2024
9:00 AM
by: ದ ರೂರಲ್ ಮಿರರ್.ಕಾಂ
ನೇಪಾಳದಲ್ಲಿ ಅಡಿಕೆ ಆಮದು ಮೇಲಿನ ನಿರ್ಬಂಧ ಸಡಿಲಿಕೆ | ಅಡಿಕೆ ಕಳ್ಳಸಾಗಾಣಿಕೆಗೆ ಇನ್ನೊಂದು ದಾರಿ…? |
September 29, 2024
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror