ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಪತ್ತೆ ಮಾಡಿದೆ. 10.84 ಕೋಟಿ ಮೌಲ್ಯದ 958 ಚೀಲಗಳ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಕಳೆದ ಕೆಲವು ಸಮಯಗಳಿಂದ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿದೆ. ಮ್ಯಾನ್ಮಾರ್ ಅಡಿಕೆಯನ್ನು ಮಣಿಪುರ, ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಸಾಗಾಟ ಮಾಡಲಾಗುತ್ತಿತ್ತು. ಇದೀಗ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಸ್ಸಾಂ ರೈಫಲ್ಸ್ ಪಡೆ ಕಾಮ್ಜಾಂಗ್ ಜಿಲ್ಲೆಯ ಇಂಡೋ-ಮ್ಯಾನ್ಮಾರ್ ಅಂತರಾಷ್ಟ್ರೀಯ ಗಡಿಯ ಪ್ರದೇಶದಲ್ಲಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾಗ ಸುಮಾರು 17 ವಾಹನಗಳಲ್ಲಿ ಪತ್ತೆಯಾಗಿತ್ತು. ಮಣಿಪುರ ಮತ್ತು ಮ್ಯಾನ್ಮಾರ್ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ಟ್ರಕ್ಗಳ ಮೂಲಕ ಸಾಗಾಟ ಮಾಡಲಾಗುತ್ತಿತ್ತು.ಅಕ್ರಮ ವ್ಯಾಪಾರಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಿದೆ.
ಈ ವರ್ಷದ ಆಗಸ್ಟ್ನಲ್ಲಿ, ಅಸ್ಸಾಂ ರೈಫಲ್ಸ್ನ ಸಿಬ್ಬಂದಿ ಸುಮಾರು 4.84 ಕೋಟಿ ರೂ.ಗೂ ಹೆಚ್ಚು ಬರ್ಮಾ ಅಡಿಕೆಗಳನ್ನು ವಶಪಡಿಸಿಕೊಂಡಿದ್ದರು. ಕಳ್ಳಸಾಗಣೆ ಮಾಡಲಾದ ಅಡಿಕೆಗಳನ್ನು ಮೊದಲು ಮ್ಯಾನ್ಮಾರ್ನಿಂದ ಮಣಿಪುರಕ್ಕೆ ಟ್ರಕ್ಗಳಲ್ಲಿ ತರಲಾಗುತ್ತದೆ. ನಂತರ ನಾಗಾಲ್ಯಾಂಡ್ನ ದಿಮಾಪುರ್ ಅಥವಾ ಅಸ್ಸಾಂಗೆ ಸಾಗಿಸಲಾಗುತ್ತದೆ. ಬಳಿಕ ದೇಶದ ಇತರ ಭಾಗಗಳಿಗೆ ರವಾನೆಯಾಗುತ್ತದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…