Advertisement
MIRROR FOCUS

ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ

Share

ಅಸ್ಸಾಂ ರಾಜ್ಯದ ಸಣ್ಣ ಚಹಾ ಬೆಳೆಗಾರರು ಇತ್ತೀಚೆಗೆ ಕರಿಮೆಣಸು ಬೆಳೆಯತ್ತ ಮುಖಮಾಡುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ಚಹಾ ಬೆಳೆಯಿಂದ ಲಾಭ ಕಡಿಮೆಯಾಗುತ್ತಿರುವುದು, ಉತ್ಪಾದನಾ ವೆಚ್ಚ ಹೆಚ್ಚುತ್ತಿರುವುದು ಹಾಗೂ ಮಾರುಕಟ್ಟೆ ಬೆಲೆಯಲ್ಲಿ ಅಸ್ಥಿರತೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಪರ್ಯಾಯ ಆದಾಯ ಮೂಲಗಳನ್ನು ಹುಡುಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಳುಮೆಣಸು ಕೃಷಿಯತ್ತ ಮುಖ ಮಾಡಿದ್ದಾರೆ. ಕೃಷಿಯಲ್ಲಿ ಪರ್ಯಾಯ ಆದಾಯವೂ ಮುಖ್ಯ ಎನ್ನುವುದಕ್ಕೆ ಇದೊಂದು ಸಾಕ್ಷಿಯಾಗಿದೆ.

ಚಹಾ ಬೆಳೆಯಿಂದ ಲಾಭ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಚಹಾ ತೋಟಗಳಲ್ಲಿರುವ ಮರಗಳನ್ನು ಆಧಾರವಾಗಿ ಬಳಸಿಕೊಂಡು ಕಾಳುಮೆಣಸು ಬೆಳೆ ಬೆಳೆಸುವ ಹೊಸ ಮಾದರಿಯನ್ನು ರೈತರು ಅನುಸರಿಸುತ್ತಿದ್ದಾರೆ. ಇದರಿಂದ ಹೆಚ್ಚುವರಿ ಭೂಮಿಯ ಅಗತ್ಯವಿಲ್ಲದೆ, ಅದೇ ತೋಟದಲ್ಲಿ ಎರಡನೇ ಆದಾಯ ಮೂಲವನ್ನು ಸೃಷ್ಟಿಸಬಹುದು ಎಂಬುದು ರೈತರ ಅಭಿಪ್ರಾಯವಾಗಿದೆ.

ಅಸ್ಸಾಂನಲ್ಲಿ ಕಾಳುಮೆಣಸು ಬೆಳೆ ಕಡಿಮೆ ವೆಚ್ಚದಲ್ಲಿ ಬೆಳೆಯಬಹುದಾಗಿದ್ದು, ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವ ಕಾರಣ ರೈತರಿಗೆ ಇದು ಲಾಭದಾಯಕ ಆಯ್ಕೆಯಾಗಿ ಪರಿಣಮಿಸಿದೆ.  ಸ್ಥಳೀಯ ತಜ್ಞರ ಪ್ರಕಾರ, ಈ ರೀತಿಯ ಮಿಶ್ರ ಬೆಳೆ ಪದ್ಧತಿ  ರೈತರಿಗೆ ದೀರ್ಘಾವಧಿಯಲ್ಲಿ ಆದಾಯ ಸ್ಥಿರತೆ ನೀಡುವುದರ ಜೊತೆಗೆ, ಕೃಷಿಯಲ್ಲಿ ವೈವಿಧ್ಯತೆ ತರಲು ಸಹಕಾರಿ ಆಗಲಿದೆ.

ಅಸ್ಸಾಂ ರಾಜ್ಯವು ಭಾರತದಲ್ಲಿ ಚಹಾ ಉತ್ಪಾದನೆಯಲ್ಲಿ ಪ್ರಮುಖ ಸ್ಥಾನದಲ್ಲಿದ್ದು, ಸಾವಿರಾರು ಸಣ್ಣ ರೈತರು ಈ ಕ್ಷೇತ್ರದ ಮೇಲೆ ಅವಲಂಬಿತರಾಗಿದ್ದಾರೆ. ಇದೀಗ ಈ ಹೊಸ ಪ್ರಯೋಗ ಯಶಸ್ವಿಯಾದರೆ ಅಸ್ಸಾಂ ಕೂಡಾ ಕಾಳುಮೆಣಸು ಕೃಷಿಯಲ್ಲಿ ವಿಶೇಷ ಸಾಧನೆ ಮಾಡಲಿದೆ ಎಂದು ತಜ್ಞರು ಹೇಳುತ್ತಾರೆ.

ದೇಶದಲ್ಲಿನ ಹವಾಮಾನ ಅಸ್ಥಿರತೆ ಹಾಗೂ ಮಾರುಕಟ್ಟೆ ವ್ಯವಸ್ಥೆಯ ಕಾರಣದಿಂದ ಕೃಷಿಕರಿಗೆ ಇಂದು ಪರ್ಯಾಯ ಬೆಳೆ ಅಥವಾ ಉಪ ಬೆಳೆಗಳ ಅಗತ್ಯತೆ ಹೆಚ್ಚಾಗುತ್ತದೆ.

Small tea growers in Assam are turning to black pepper cultivation as an additional income source due to low profitability in tea farming. Intercropping pepper in tea plantations is emerging as a sustainable and profitable model.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

12 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

21 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

21 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago