Advertisement
MIRROR FOCUS

ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ

Share

ಅಸ್ಸಾಂ ರಾಜ್ಯದ ಸಣ್ಣ ಚಹಾ ಬೆಳೆಗಾರರು ಇತ್ತೀಚೆಗೆ ಕರಿಮೆಣಸು ಬೆಳೆಯತ್ತ ಮುಖಮಾಡುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ಚಹಾ ಬೆಳೆಯಿಂದ ಲಾಭ ಕಡಿಮೆಯಾಗುತ್ತಿರುವುದು, ಉತ್ಪಾದನಾ ವೆಚ್ಚ ಹೆಚ್ಚುತ್ತಿರುವುದು ಹಾಗೂ ಮಾರುಕಟ್ಟೆ ಬೆಲೆಯಲ್ಲಿ ಅಸ್ಥಿರತೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಪರ್ಯಾಯ ಆದಾಯ ಮೂಲಗಳನ್ನು ಹುಡುಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಳುಮೆಣಸು ಕೃಷಿಯತ್ತ ಮುಖ ಮಾಡಿದ್ದಾರೆ. ಕೃಷಿಯಲ್ಲಿ ಪರ್ಯಾಯ ಆದಾಯವೂ ಮುಖ್ಯ ಎನ್ನುವುದಕ್ಕೆ ಇದೊಂದು ಸಾಕ್ಷಿಯಾಗಿದೆ.

ಚಹಾ ಬೆಳೆಯಿಂದ ಲಾಭ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಚಹಾ ತೋಟಗಳಲ್ಲಿರುವ ಮರಗಳನ್ನು ಆಧಾರವಾಗಿ ಬಳಸಿಕೊಂಡು ಕಾಳುಮೆಣಸು ಬೆಳೆ ಬೆಳೆಸುವ ಹೊಸ ಮಾದರಿಯನ್ನು ರೈತರು ಅನುಸರಿಸುತ್ತಿದ್ದಾರೆ. ಇದರಿಂದ ಹೆಚ್ಚುವರಿ ಭೂಮಿಯ ಅಗತ್ಯವಿಲ್ಲದೆ, ಅದೇ ತೋಟದಲ್ಲಿ ಎರಡನೇ ಆದಾಯ ಮೂಲವನ್ನು ಸೃಷ್ಟಿಸಬಹುದು ಎಂಬುದು ರೈತರ ಅಭಿಪ್ರಾಯವಾಗಿದೆ.

ಅಸ್ಸಾಂನಲ್ಲಿ ಕಾಳುಮೆಣಸು ಬೆಳೆ ಕಡಿಮೆ ವೆಚ್ಚದಲ್ಲಿ ಬೆಳೆಯಬಹುದಾಗಿದ್ದು, ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವ ಕಾರಣ ರೈತರಿಗೆ ಇದು ಲಾಭದಾಯಕ ಆಯ್ಕೆಯಾಗಿ ಪರಿಣಮಿಸಿದೆ.  ಸ್ಥಳೀಯ ತಜ್ಞರ ಪ್ರಕಾರ, ಈ ರೀತಿಯ ಮಿಶ್ರ ಬೆಳೆ ಪದ್ಧತಿ  ರೈತರಿಗೆ ದೀರ್ಘಾವಧಿಯಲ್ಲಿ ಆದಾಯ ಸ್ಥಿರತೆ ನೀಡುವುದರ ಜೊತೆಗೆ, ಕೃಷಿಯಲ್ಲಿ ವೈವಿಧ್ಯತೆ ತರಲು ಸಹಕಾರಿ ಆಗಲಿದೆ.

ಅಸ್ಸಾಂ ರಾಜ್ಯವು ಭಾರತದಲ್ಲಿ ಚಹಾ ಉತ್ಪಾದನೆಯಲ್ಲಿ ಪ್ರಮುಖ ಸ್ಥಾನದಲ್ಲಿದ್ದು, ಸಾವಿರಾರು ಸಣ್ಣ ರೈತರು ಈ ಕ್ಷೇತ್ರದ ಮೇಲೆ ಅವಲಂಬಿತರಾಗಿದ್ದಾರೆ. ಇದೀಗ ಈ ಹೊಸ ಪ್ರಯೋಗ ಯಶಸ್ವಿಯಾದರೆ ಅಸ್ಸಾಂ ಕೂಡಾ ಕಾಳುಮೆಣಸು ಕೃಷಿಯಲ್ಲಿ ವಿಶೇಷ ಸಾಧನೆ ಮಾಡಲಿದೆ ಎಂದು ತಜ್ಞರು ಹೇಳುತ್ತಾರೆ.

ದೇಶದಲ್ಲಿನ ಹವಾಮಾನ ಅಸ್ಥಿರತೆ ಹಾಗೂ ಮಾರುಕಟ್ಟೆ ವ್ಯವಸ್ಥೆಯ ಕಾರಣದಿಂದ ಕೃಷಿಕರಿಗೆ ಇಂದು ಪರ್ಯಾಯ ಬೆಳೆ ಅಥವಾ ಉಪ ಬೆಳೆಗಳ ಅಗತ್ಯತೆ ಹೆಚ್ಚಾಗುತ್ತದೆ.

Small tea growers in Assam are turning to black pepper cultivation as an additional income source due to low profitability in tea farming. Intercropping pepper in tea plantations is emerging as a sustainable and profitable model.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

11 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

11 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

11 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

11 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

21 hours ago