ಸುದ್ದಿಗಳು

ಚುನಾವಣಾ ಅಖಾಡದಲ್ಲಿ ಅಪ್ಪ-ಮಕ್ಕಳು : ಗೆಲುವು ಯಾರಿಗೆ? ಸೋಲು ಯಾರಿಗೆ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಾರಿ ವಿಧಾನಸಭೆ ಚುನಾವಣೆ ಹತ್ತು ಹಲವು ವಿಶೇಷಗಳಿಂದ ಕೂಡಿತ್ತು. ಕುಟುಂಬ ರಾಜಕಾರಣದ ಬಗ್ಗೆ ಬಹುತೇಕ ಪಕ್ಷಗಳು ಭಾಷಣ ಮಾಡಿದ್ದರೂ, ಗೆಲ್ಲುವ ಹಿತದೃಷ್ಟಿಯಿಂದ ಒಂದೇ ಕುಟುಂಬಕ್ಕೆ ಟಿಕೆಟ್ ನೀಡಿದ ಉದಾಹರಣೆಗಳು ಇವೆ. ಅದರಲ್ಲೂ ತಂದೆ ಮಗ ಅಥವಾ ತಂದೆ ಮಗಳಿಗೆ ಟಿಕೆಟ್ ನೀಡುವ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದವು ಆಯಾ ಪಕ್ಷಗಳು. ಈ ಬಾರಿ ಯಾವ ಕ್ಷೇತ್ರದಲ್ಲಿ ಯಾರೆಲ್ಲ ಅಪ್ಪ ಮಕ್ಕಳು ಅಭ್ಯರ್ಥಿಯಾಗಿದ್ದರು? ಯಾರು ಸೋತಿದ್ದಾರೆ, ಯಾರು ಗೆದ್ದಿದ್ದಾರೆ ಎನ್ನುವ ಲೆಕ್ಕಾಚಾರ ಇಲ್ಲಿದೆ.

Advertisement
Advertisement

ಅರಕಲಗೂಡಿನಲ್ಲಿ ಜೆಡಿಎಸ್‌ ನಿಂದ ಎ. ಮಂಜು ಜಯಗಳಿಸಿದ್ದರೆ, ಬಿಜೆಪಿಯ ಭದ್ರ ಕೋಟೆ ಎನಿಸಿದ್ದ ಮಡಿಕೇರಿಯಲ್ಲಿ ಅವರ ಮಗ ಕಾಂಗ್ರೆಸ್ ನಿಂದ ಡಾ. ಮಂಥರ್ ಗೌಡ ಜಯಗಳಿಸಿದ್ದಾರೆ. ಇಬ್ಬರೂ ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವುದು ವಿಶೇಷ.  ಜೆಡಿಎಸ್‌ ರಾಜಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಚನ್ನಪಟ್ಟಣದಲ್ಲಿ ಅತ್ಯಲ್ಪ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದರೆ, ಮಗ ನಿಖಿಲ್ ಕುಮಾರ ಸ್ವಾಮಿ ಭಾರೀ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಎದುರು ಸೋಲು ಕಂಡಿದ್ದಾರೆ.

ಈ ಹಿಂದೆ ಜೆಡಿಎಸ್‌ ರಾಜಾಧ್ಯಕ್ಷರಾಗಿದ್ದ ಹಾಗೂ ಹಾಲಿ ಶಾಸಕ ಜಿ.ಟಿ. ದೇವೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಜಯಗಳಿಸಿದರೆ, ಅವರ ಮಗ ಜಿ. ಡಿ. ಹರೀಶ್ ಗೌಡ ಅವರು ಜೆಡಿಎಸ್ ನಿಂದ ಹುಣಸೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.  ಬೆಂಗಳೂರಿನ ವಿಜಯನಗರ ಕ್ಷೇತ್ರದಿಂದ ಎಂ. ಕೃಷ್ಣ ಅವರು ಕಾಂಗ್ರೆಸ್‌ ನಿಂದ ಮತ್ತು ಅವರ ಮಗ ಪ್ರಿಯಾ ಕೃಷ್ಣ ಅವರು ಗೋವಿಂದರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು ಇಬ್ಬರೂ  ಜಯ ಸಾಧಿಸಿದ್ದಾರೆ.

Advertisement

ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅತೀ ಹಿರಿಯ ಸ್ಪರ್ಧಿ  91 ವರ್ಷದ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಮತ್ತು ದಾವಣಗೆರೆ ಉತ್ತರ ಕ್ಷೇತ್ರದಿಂದ ಅವರ ಮಗ ಎಸ್‌.ಎಸ್‌. ಮಲ್ಲಿಕಾರ್ಜುನ ಅವರು ಜಯಗಳಿಸಿದ್ದಾರೆ. ಇಬ್ಬರೂ ಕೂಡ ಕಾಂಗ್ರೆಸ್‌ ನಿಂದ ಗೆಲುವು ಸಾಧಿಸಿದ್ದಾರೆ.

ಬೆಂಗಳೂರಿನ ಬಿಟಿಎಂ ಲೇಔಟ್‌ ನಿಂದ ರಾಮಲಿಂಗ ರೆಡ್ಡಿ ಅವರು ಕಾಂಗ್ರೆಸ್‌ ನಿಂದ ಜಯಗಳಿಸಿದ್ದರೆ ಅವರ ಮಗಳು ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್‌ ನಿಂದ ಅತ್ಯಲ್ಪ ಅಂದರೆ 160 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ದೇವನಹಳ್ಳಿ ಕ್ಷೇತ್ರದಿಂದ ಮುನಿಯಪ್ಪ ಗೆಲುವಿನ ನಗೆ ಬೀರಿದಿದ್ದಾರೆ. ಅವರ ಪುತ್ರಿ ರೂಪಾ ಶಶಿಧರ್ ಕೆಜಿಎಫ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

1 hour ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

2 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

2 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago