Advertisement
ಸುದ್ದಿಗಳು

ಚುನಾವಣಾ ಅಖಾಡದಲ್ಲಿ ಅಪ್ಪ-ಮಕ್ಕಳು : ಗೆಲುವು ಯಾರಿಗೆ? ಸೋಲು ಯಾರಿಗೆ?

Share

ಈ ಬಾರಿ ವಿಧಾನಸಭೆ ಚುನಾವಣೆ ಹತ್ತು ಹಲವು ವಿಶೇಷಗಳಿಂದ ಕೂಡಿತ್ತು. ಕುಟುಂಬ ರಾಜಕಾರಣದ ಬಗ್ಗೆ ಬಹುತೇಕ ಪಕ್ಷಗಳು ಭಾಷಣ ಮಾಡಿದ್ದರೂ, ಗೆಲ್ಲುವ ಹಿತದೃಷ್ಟಿಯಿಂದ ಒಂದೇ ಕುಟುಂಬಕ್ಕೆ ಟಿಕೆಟ್ ನೀಡಿದ ಉದಾಹರಣೆಗಳು ಇವೆ. ಅದರಲ್ಲೂ ತಂದೆ ಮಗ ಅಥವಾ ತಂದೆ ಮಗಳಿಗೆ ಟಿಕೆಟ್ ನೀಡುವ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದವು ಆಯಾ ಪಕ್ಷಗಳು. ಈ ಬಾರಿ ಯಾವ ಕ್ಷೇತ್ರದಲ್ಲಿ ಯಾರೆಲ್ಲ ಅಪ್ಪ ಮಕ್ಕಳು ಅಭ್ಯರ್ಥಿಯಾಗಿದ್ದರು? ಯಾರು ಸೋತಿದ್ದಾರೆ, ಯಾರು ಗೆದ್ದಿದ್ದಾರೆ ಎನ್ನುವ ಲೆಕ್ಕಾಚಾರ ಇಲ್ಲಿದೆ.

ಅರಕಲಗೂಡಿನಲ್ಲಿ ಜೆಡಿಎಸ್‌ ನಿಂದ ಎ. ಮಂಜು ಜಯಗಳಿಸಿದ್ದರೆ, ಬಿಜೆಪಿಯ ಭದ್ರ ಕೋಟೆ ಎನಿಸಿದ್ದ ಮಡಿಕೇರಿಯಲ್ಲಿ ಅವರ ಮಗ ಕಾಂಗ್ರೆಸ್ ನಿಂದ ಡಾ. ಮಂಥರ್ ಗೌಡ ಜಯಗಳಿಸಿದ್ದಾರೆ. ಇಬ್ಬರೂ ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವುದು ವಿಶೇಷ.  ಜೆಡಿಎಸ್‌ ರಾಜಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಚನ್ನಪಟ್ಟಣದಲ್ಲಿ ಅತ್ಯಲ್ಪ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದರೆ, ಮಗ ನಿಖಿಲ್ ಕುಮಾರ ಸ್ವಾಮಿ ಭಾರೀ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಎದುರು ಸೋಲು ಕಂಡಿದ್ದಾರೆ.

ಈ ಹಿಂದೆ ಜೆಡಿಎಸ್‌ ರಾಜಾಧ್ಯಕ್ಷರಾಗಿದ್ದ ಹಾಗೂ ಹಾಲಿ ಶಾಸಕ ಜಿ.ಟಿ. ದೇವೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಜಯಗಳಿಸಿದರೆ, ಅವರ ಮಗ ಜಿ. ಡಿ. ಹರೀಶ್ ಗೌಡ ಅವರು ಜೆಡಿಎಸ್ ನಿಂದ ಹುಣಸೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.  ಬೆಂಗಳೂರಿನ ವಿಜಯನಗರ ಕ್ಷೇತ್ರದಿಂದ ಎಂ. ಕೃಷ್ಣ ಅವರು ಕಾಂಗ್ರೆಸ್‌ ನಿಂದ ಮತ್ತು ಅವರ ಮಗ ಪ್ರಿಯಾ ಕೃಷ್ಣ ಅವರು ಗೋವಿಂದರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು ಇಬ್ಬರೂ  ಜಯ ಸಾಧಿಸಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅತೀ ಹಿರಿಯ ಸ್ಪರ್ಧಿ  91 ವರ್ಷದ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಮತ್ತು ದಾವಣಗೆರೆ ಉತ್ತರ ಕ್ಷೇತ್ರದಿಂದ ಅವರ ಮಗ ಎಸ್‌.ಎಸ್‌. ಮಲ್ಲಿಕಾರ್ಜುನ ಅವರು ಜಯಗಳಿಸಿದ್ದಾರೆ. ಇಬ್ಬರೂ ಕೂಡ ಕಾಂಗ್ರೆಸ್‌ ನಿಂದ ಗೆಲುವು ಸಾಧಿಸಿದ್ದಾರೆ.

ಬೆಂಗಳೂರಿನ ಬಿಟಿಎಂ ಲೇಔಟ್‌ ನಿಂದ ರಾಮಲಿಂಗ ರೆಡ್ಡಿ ಅವರು ಕಾಂಗ್ರೆಸ್‌ ನಿಂದ ಜಯಗಳಿಸಿದ್ದರೆ ಅವರ ಮಗಳು ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್‌ ನಿಂದ ಅತ್ಯಲ್ಪ ಅಂದರೆ 160 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ದೇವನಹಳ್ಳಿ ಕ್ಷೇತ್ರದಿಂದ ಮುನಿಯಪ್ಪ ಗೆಲುವಿನ ನಗೆ ಬೀರಿದಿದ್ದಾರೆ. ಅವರ ಪುತ್ರಿ ರೂಪಾ ಶಶಿಧರ್ ಕೆಜಿಎಫ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

4 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

6 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago