ಕನ್ನಡವೇ ಮೊದಲು, ರೈತ ಚೈತನ್ಯ – ಜೆಡಿಎಸ್‌ನಿಂದ ಭರವಸೆ ಪತ್ರ ಬಿಡುಗಡೆ

April 15, 2023
11:18 AM

ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ತಮ್ಮ ಕಾರ್ಯ ಚಟುವಟಿಕೆಯನ್ನು ಚುರುಕಾಗಿಸಿವೆ. ತಮ್ಮ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಪುಂಖಾನು ಪುಂಖವಾಗಿ ಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಹೊತ್ತಲ್ಲೇ ಮಾಜಿ ಪ್ರಧಾನಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಭರವಸೆ ಪತ್ರ ಬಿಡುಗಡೆ ಮಾಡಿದ್ದಾರೆ.

ಈ ಬಗ್ಗೆ ತಿಳಿಸಿರುವ ದೇವೇಗೌಡ, ಪ್ರಣಾಳಿಕೆ ಕಾರ್ಯಕ್ರಮವನ್ನು ಮುಂದೆ ಮಾಡಲಿದ್ದೇವೆ. ಈಗ ಜೆಡಿಎಸ್‌ನಿಂದ ಭರವಸೆ ಪತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

12 ಭರವಸೆ?
1. ಮಾತೃ ಶ್ರೀ ಮತ್ತು ಮಹಿಳಾ ಸಬಲೀಕರಣ
2. ಕನ್ನಡವೇ ಮೊದಲು
3. ರೈತ ಚೈತನ್ಯ
4. ಹಿರಿಯ ನಾಗರಿಕರಿಗೆ ಸನ್ಮಾನ
5. ಶಿಕ್ಷಣವೇ ಆಧುನಿಕ ಶಕ್ತಿ
6. ಆರೋಗ್ಯ ಸಂಪತ್ತು
7. ವಿಕಲಚೇತನರಿಗೆ ಆಸರೆ
8. ಆರಕ್ಷಕರಿಗೆ ಅಭಯ
9. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ
10. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಏಳಿಗೆ
11.ಯುವಜನ ಸಬಲೀಕರಣ
12. ವೃತ್ತಿನಿರತ ವಕೀಲರ ಅಭ್ಯುದಯ

ಪ್ರಣಾಳಿಕೆ ಬಿಡುಗಡೆಗೂ ಮುನ್ನ ಪ್ರಣಾಳಿಕೆಯನ್ನು ದೇವರ ಮುಂದಿಟ್ಟು ಚನ್ನಮ್ಮ, ಕುಮಾರಸ್ವಾಮಿ ಪೂಜೆ ನೆರವೇರಿಸಿದರು. ಈವೇಳೆ ದೇವೇಗೌಡ ಕುಟುಂಬ, ಸಿಎಂ ಇಬ್ರಾಹಿಂ ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |
March 16, 2025
11:20 AM
by: ಸಾಯಿಶೇಖರ್ ಕರಿಕಳ
ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ
March 16, 2025
7:53 AM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ
March 16, 2025
7:36 AM
by: The Rural Mirror ಸುದ್ದಿಜಾಲ
ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
March 16, 2025
7:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror