ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ತಮ್ಮ ಕಾರ್ಯ ಚಟುವಟಿಕೆಯನ್ನು ಚುರುಕಾಗಿಸಿವೆ. ತಮ್ಮ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಪುಂಖಾನು ಪುಂಖವಾಗಿ ಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಹೊತ್ತಲ್ಲೇ ಮಾಜಿ ಪ್ರಧಾನಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಭರವಸೆ ಪತ್ರ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ತಿಳಿಸಿರುವ ದೇವೇಗೌಡ, ಪ್ರಣಾಳಿಕೆ ಕಾರ್ಯಕ್ರಮವನ್ನು ಮುಂದೆ ಮಾಡಲಿದ್ದೇವೆ. ಈಗ ಜೆಡಿಎಸ್ನಿಂದ ಭರವಸೆ ಪತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
12 ಭರವಸೆ?
1. ಮಾತೃ ಶ್ರೀ ಮತ್ತು ಮಹಿಳಾ ಸಬಲೀಕರಣ
2. ಕನ್ನಡವೇ ಮೊದಲು
3. ರೈತ ಚೈತನ್ಯ
4. ಹಿರಿಯ ನಾಗರಿಕರಿಗೆ ಸನ್ಮಾನ
5. ಶಿಕ್ಷಣವೇ ಆಧುನಿಕ ಶಕ್ತಿ
6. ಆರೋಗ್ಯ ಸಂಪತ್ತು
7. ವಿಕಲಚೇತನರಿಗೆ ಆಸರೆ
8. ಆರಕ್ಷಕರಿಗೆ ಅಭಯ
9. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ
10. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಏಳಿಗೆ
11.ಯುವಜನ ಸಬಲೀಕರಣ
12. ವೃತ್ತಿನಿರತ ವಕೀಲರ ಅಭ್ಯುದಯ
ಪ್ರಣಾಳಿಕೆ ಬಿಡುಗಡೆಗೂ ಮುನ್ನ ಪ್ರಣಾಳಿಕೆಯನ್ನು ದೇವರ ಮುಂದಿಟ್ಟು ಚನ್ನಮ್ಮ, ಕುಮಾರಸ್ವಾಮಿ ಪೂಜೆ ನೆರವೇರಿಸಿದರು. ಈವೇಳೆ ದೇವೇಗೌಡ ಕುಟುಂಬ, ಸಿಎಂ ಇಬ್ರಾಹಿಂ ಉಪಸ್ಥಿತರಿದ್ದರು.
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…