ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ತಮ್ಮ ಕಾರ್ಯ ಚಟುವಟಿಕೆಯನ್ನು ಚುರುಕಾಗಿಸಿವೆ. ತಮ್ಮ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಪುಂಖಾನು ಪುಂಖವಾಗಿ ಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಹೊತ್ತಲ್ಲೇ ಮಾಜಿ ಪ್ರಧಾನಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಭರವಸೆ ಪತ್ರ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ತಿಳಿಸಿರುವ ದೇವೇಗೌಡ, ಪ್ರಣಾಳಿಕೆ ಕಾರ್ಯಕ್ರಮವನ್ನು ಮುಂದೆ ಮಾಡಲಿದ್ದೇವೆ. ಈಗ ಜೆಡಿಎಸ್ನಿಂದ ಭರವಸೆ ಪತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
12 ಭರವಸೆ?
1. ಮಾತೃ ಶ್ರೀ ಮತ್ತು ಮಹಿಳಾ ಸಬಲೀಕರಣ
2. ಕನ್ನಡವೇ ಮೊದಲು
3. ರೈತ ಚೈತನ್ಯ
4. ಹಿರಿಯ ನಾಗರಿಕರಿಗೆ ಸನ್ಮಾನ
5. ಶಿಕ್ಷಣವೇ ಆಧುನಿಕ ಶಕ್ತಿ
6. ಆರೋಗ್ಯ ಸಂಪತ್ತು
7. ವಿಕಲಚೇತನರಿಗೆ ಆಸರೆ
8. ಆರಕ್ಷಕರಿಗೆ ಅಭಯ
9. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ
10. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಏಳಿಗೆ
11.ಯುವಜನ ಸಬಲೀಕರಣ
12. ವೃತ್ತಿನಿರತ ವಕೀಲರ ಅಭ್ಯುದಯ
ಪ್ರಣಾಳಿಕೆ ಬಿಡುಗಡೆಗೂ ಮುನ್ನ ಪ್ರಣಾಳಿಕೆಯನ್ನು ದೇವರ ಮುಂದಿಟ್ಟು ಚನ್ನಮ್ಮ, ಕುಮಾರಸ್ವಾಮಿ ಪೂಜೆ ನೆರವೇರಿಸಿದರು. ಈವೇಳೆ ದೇವೇಗೌಡ ಕುಟುಂಬ, ಸಿಎಂ ಇಬ್ರಾಹಿಂ ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…