Advertisement
MIRROR FOCUS

ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ

Share

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು  ಭಾರತಕ್ಕೆ ಮರಳಲಿದ್ದಾರೆ. 18 ದಿನಗಳ ಕಾಲ  ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಯಶಸ್ವಿಯಾಗಿ ಕಳೆದು, ಮರಳಿ ಭೂಮಿಗೆ ಬಂದಿದ್ದ ಶುಭಾಂಶು ಶುಕ್ಲಾ, ಅಮೆರಿಕಾದ ಪುನರ್ ವಸತಿ ಕೇಂದ್ರದಲ್ಲಿದ್ದರು. ಭೂಮಿಯ ವಾತಾವರಣಕ್ಕೆ ಸಂಪೂರ್ಣ ಹೊಂದಿಕೊಂಡ ಹಿನ್ನೆಲೆಯಲ್ಲಿ  ಅವರು  ಭಾರತಕ್ಕೆ ಭೇಟಿ ನೀಡಲಿದ್ದಾರೆ.  ಈ ಕುರಿತು  ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕವಾಗಿ ಮಾಹಿತಿ ಹಂಚಿಕೊಂಡಿರುವ ಶುಭಾಂಶು ಶುಕ್ಲಾ, ಕುಟುಂಬದ ಸದಸ್ಯರು, ಸ್ನೇಹಿತರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಗಗನಯಾನ ಮಿಷನ್  ಭಾಗವಾಗಿದ್ದ ಸ್ನೇಹಿತರನ್ನು ಬಿಟ್ಟು ವಾಪಸ್ಸಾಗುತ್ತಿರುವುದು ಹೃದಯ ಭಾರವಾಗಿದೆ ಎಂದು ತಿಳಿಸಿದ್ದಾರೆ. 2027ರಲ್ಲಿ ಇಸ್ರೋ ಕೈಗೊಳ್ಳಲು ಉದ್ದೇಶಿಸಿರುವ ಮಾನವ ಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ನಾಸಾ ಜತೆಗೂಡಿ ನಡೆಸಿದ ಮಾನವ ಸಹಿತ ಬಾಹ್ಯಾಕಾಶ ಯಾನದಲ್ಲಿ ಶುಭಾಂಶು ಶುಕ್ಲ ಅವರು ಇತರ ಮೂವರು ಗಗನಯಾನಿಗಳೊಂದಿಗೆ ಪಾಲ್ಗೊಂಡಿದ್ದರು. ಕಳೆದ ಒಂದು ವರ್ಷದಿಂದ ಶುಭಾಂಶು ಅವರು ಅಮೆರಿಕದಲ್ಲಿದ್ದು ಆಕ್ಸಿಯಂ-4 ಯೋಜನೆಯ ತರಬೇತಿಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 hour ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago