ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾರತಕ್ಕೆ ಮರಳಲಿದ್ದಾರೆ. 18 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಯಶಸ್ವಿಯಾಗಿ ಕಳೆದು, ಮರಳಿ ಭೂಮಿಗೆ ಬಂದಿದ್ದ ಶುಭಾಂಶು ಶುಕ್ಲಾ, ಅಮೆರಿಕಾದ ಪುನರ್ ವಸತಿ ಕೇಂದ್ರದಲ್ಲಿದ್ದರು. ಭೂಮಿಯ ವಾತಾವರಣಕ್ಕೆ ಸಂಪೂರ್ಣ ಹೊಂದಿಕೊಂಡ ಹಿನ್ನೆಲೆಯಲ್ಲಿ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕವಾಗಿ ಮಾಹಿತಿ ಹಂಚಿಕೊಂಡಿರುವ ಶುಭಾಂಶು ಶುಕ್ಲಾ, ಕುಟುಂಬದ ಸದಸ್ಯರು, ಸ್ನೇಹಿತರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಗಗನಯಾನ ಮಿಷನ್ ಭಾಗವಾಗಿದ್ದ ಸ್ನೇಹಿತರನ್ನು ಬಿಟ್ಟು ವಾಪಸ್ಸಾಗುತ್ತಿರುವುದು ಹೃದಯ ಭಾರವಾಗಿದೆ ಎಂದು ತಿಳಿಸಿದ್ದಾರೆ. 2027ರಲ್ಲಿ ಇಸ್ರೋ ಕೈಗೊಳ್ಳಲು ಉದ್ದೇಶಿಸಿರುವ ಮಾನವ ಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ನಾಸಾ ಜತೆಗೂಡಿ ನಡೆಸಿದ ಮಾನವ ಸಹಿತ ಬಾಹ್ಯಾಕಾಶ ಯಾನದಲ್ಲಿ ಶುಭಾಂಶು ಶುಕ್ಲ ಅವರು ಇತರ ಮೂವರು ಗಗನಯಾನಿಗಳೊಂದಿಗೆ ಪಾಲ್ಗೊಂಡಿದ್ದರು. ಕಳೆದ ಒಂದು ವರ್ಷದಿಂದ ಶುಭಾಂಶು ಅವರು ಅಮೆರಿಕದಲ್ಲಿದ್ದು ಆಕ್ಸಿಯಂ-4 ಯೋಜನೆಯ ತರಬೇತಿಯಲ್ಲಿ ಪಾಲ್ಗೊಂಡಿದ್ದರು.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…