ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾರತಕ್ಕೆ ಮರಳಲಿದ್ದಾರೆ. 18 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಯಶಸ್ವಿಯಾಗಿ ಕಳೆದು, ಮರಳಿ ಭೂಮಿಗೆ ಬಂದಿದ್ದ ಶುಭಾಂಶು ಶುಕ್ಲಾ, ಅಮೆರಿಕಾದ ಪುನರ್ ವಸತಿ ಕೇಂದ್ರದಲ್ಲಿದ್ದರು. ಭೂಮಿಯ ವಾತಾವರಣಕ್ಕೆ ಸಂಪೂರ್ಣ ಹೊಂದಿಕೊಂಡ ಹಿನ್ನೆಲೆಯಲ್ಲಿ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕವಾಗಿ ಮಾಹಿತಿ ಹಂಚಿಕೊಂಡಿರುವ ಶುಭಾಂಶು ಶುಕ್ಲಾ, ಕುಟುಂಬದ ಸದಸ್ಯರು, ಸ್ನೇಹಿತರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಗಗನಯಾನ ಮಿಷನ್ ಭಾಗವಾಗಿದ್ದ ಸ್ನೇಹಿತರನ್ನು ಬಿಟ್ಟು ವಾಪಸ್ಸಾಗುತ್ತಿರುವುದು ಹೃದಯ ಭಾರವಾಗಿದೆ ಎಂದು ತಿಳಿಸಿದ್ದಾರೆ. 2027ರಲ್ಲಿ ಇಸ್ರೋ ಕೈಗೊಳ್ಳಲು ಉದ್ದೇಶಿಸಿರುವ ಮಾನವ ಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ನಾಸಾ ಜತೆಗೂಡಿ ನಡೆಸಿದ ಮಾನವ ಸಹಿತ ಬಾಹ್ಯಾಕಾಶ ಯಾನದಲ್ಲಿ ಶುಭಾಂಶು ಶುಕ್ಲ ಅವರು ಇತರ ಮೂವರು ಗಗನಯಾನಿಗಳೊಂದಿಗೆ ಪಾಲ್ಗೊಂಡಿದ್ದರು. ಕಳೆದ ಒಂದು ವರ್ಷದಿಂದ ಶುಭಾಂಶು ಅವರು ಅಮೆರಿಕದಲ್ಲಿದ್ದು ಆಕ್ಸಿಯಂ-4 ಯೋಜನೆಯ ತರಬೇತಿಯಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…