ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಭಾರತೀಯ ಕಾಲಮಾನದ ಪ್ರಕಾರ ಅಪರಾಹ್ನ 3 ಗಂಟೆಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಸಮೀಪದ ಪೆಸಿಫಿಕ್ ಮಹಾಸಾಗರಕ್ಕೆ ಸುರಕ್ಷಿತವಾಗಿ ಬಂದಿಳಿಯಿತು.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳನ್ನು ಕಳೆದ ನಂತರ ಭೂಮಿಗೆ ಮರಳಿದ ಗಗನಯಾತ್ರಿಗಳನ್ನು ಬಾಹ್ಯಾಕಾಶ ನೌಕೆಯಿಂದ ಸುರಕ್ಷಿತವಾಗಿ ಹೊರತರಲಾಗಿದ್ದು, ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಅನುಕೂಲವಾಗುವಂತೆ ಅವರನ್ನು 7 ದಿನಗಳ ಪುನರ್ವಸತಿಗೆ ಕಳುಹಿಸಲಾಯಿತು. ಈ ವೇಳೆ ಭಾರತದ ಶುಭಾಂಶು ಶುಕ್ಲಾ ತಮ್ಮ ಬಾಹ್ಯಾಕಾಶ ಉಡುಪಿನ ಮೇಲೆ ತ್ರಿವರ್ಣ ಧ್ವಜವನ್ನು ಧರಿಸಿದ್ದುದು ವಿಶೇಷವಾಗಿತ್ತು. ನಿನ್ನೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಪ್ರಯಾಣ ಆರಂಭಿಸಿದ್ದ ಗಗನಯಾತ್ರಿಗಳು ಸುಮಾರು 23 ಗಂಟೆಗಳ ಬಳಿಕ ಭೂಮಿಗೆ ತಲುಪಿದ್ದಾರೆ. ಶುಭಾಂಶು ಶುಕ್ಲಾ , ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮಿಷನ್ ಅನ್ನು ಆಕಾಶಗಂಗಾ ಎಂದು ಹೆಸರಿಸಲಾಗಿದ್ದು, ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ಇಸ್ರೋ , ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹಾಗೂ ಆಕ್ಸಿಯಮ್ ಸ್ಪೇಸ್ ಸಂಸ್ಥೆಯ ಸಹಯೋಗದಲ್ಲಿ ಕೈಗೊಳ್ಳಲಾಗಿತ್ತು.
ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…
ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ…
ಮಳೆಗಾಲದ ಹಿನ್ನೆಲೆಯಲ್ಲಿ ನಗರದಲ್ಲಿ ಕೊಳಚೆ ನೀರು ಸಂಗ್ರಹವಾದರೆ ಡೆಂಗ್ಯು ಜ್ವರ ಹರಡುವ ಸಾಧ್ಯತೆ…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ…
ಪ್ರೀತಿಯು ಜೀವನದ ಒಂದು ಸುಂದರ ಭಾವನೆಯಾಗಿದ್ದು, ಅದನ್ನು ಶಾಶ್ವತವಾಗಿರಿಸಲು ಸ್ವಲ್ಪ ಶ್ರಮ ಮತ್ತು…
ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…