ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಭಾರತೀಯ ಕಾಲಮಾನದ ಪ್ರಕಾರ ಅಪರಾಹ್ನ 3 ಗಂಟೆಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಸಮೀಪದ ಪೆಸಿಫಿಕ್ ಮಹಾಸಾಗರಕ್ಕೆ ಸುರಕ್ಷಿತವಾಗಿ ಬಂದಿಳಿಯಿತು.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳನ್ನು ಕಳೆದ ನಂತರ ಭೂಮಿಗೆ ಮರಳಿದ ಗಗನಯಾತ್ರಿಗಳನ್ನು ಬಾಹ್ಯಾಕಾಶ ನೌಕೆಯಿಂದ ಸುರಕ್ಷಿತವಾಗಿ ಹೊರತರಲಾಗಿದ್ದು, ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಅನುಕೂಲವಾಗುವಂತೆ ಅವರನ್ನು 7 ದಿನಗಳ ಪುನರ್ವಸತಿಗೆ ಕಳುಹಿಸಲಾಯಿತು. ಈ ವೇಳೆ ಭಾರತದ ಶುಭಾಂಶು ಶುಕ್ಲಾ ತಮ್ಮ ಬಾಹ್ಯಾಕಾಶ ಉಡುಪಿನ ಮೇಲೆ ತ್ರಿವರ್ಣ ಧ್ವಜವನ್ನು ಧರಿಸಿದ್ದುದು ವಿಶೇಷವಾಗಿತ್ತು. ನಿನ್ನೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಪ್ರಯಾಣ ಆರಂಭಿಸಿದ್ದ ಗಗನಯಾತ್ರಿಗಳು ಸುಮಾರು 23 ಗಂಟೆಗಳ ಬಳಿಕ ಭೂಮಿಗೆ ತಲುಪಿದ್ದಾರೆ. ಶುಭಾಂಶು ಶುಕ್ಲಾ , ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮಿಷನ್ ಅನ್ನು ಆಕಾಶಗಂಗಾ ಎಂದು ಹೆಸರಿಸಲಾಗಿದ್ದು, ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ಇಸ್ರೋ , ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹಾಗೂ ಆಕ್ಸಿಯಮ್ ಸ್ಪೇಸ್ ಸಂಸ್ಥೆಯ ಸಹಯೋಗದಲ್ಲಿ ಕೈಗೊಳ್ಳಲಾಗಿತ್ತು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…