ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಭಾರತೀಯ ಕಾಲಮಾನದ ಪ್ರಕಾರ ಅಪರಾಹ್ನ 3 ಗಂಟೆಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಸಮೀಪದ ಪೆಸಿಫಿಕ್ ಮಹಾಸಾಗರಕ್ಕೆ ಸುರಕ್ಷಿತವಾಗಿ ಬಂದಿಳಿಯಿತು.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳನ್ನು ಕಳೆದ ನಂತರ ಭೂಮಿಗೆ ಮರಳಿದ ಗಗನಯಾತ್ರಿಗಳನ್ನು ಬಾಹ್ಯಾಕಾಶ ನೌಕೆಯಿಂದ ಸುರಕ್ಷಿತವಾಗಿ ಹೊರತರಲಾಗಿದ್ದು, ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಅನುಕೂಲವಾಗುವಂತೆ ಅವರನ್ನು 7 ದಿನಗಳ ಪುನರ್ವಸತಿಗೆ ಕಳುಹಿಸಲಾಯಿತು. ಈ ವೇಳೆ ಭಾರತದ ಶುಭಾಂಶು ಶುಕ್ಲಾ ತಮ್ಮ ಬಾಹ್ಯಾಕಾಶ ಉಡುಪಿನ ಮೇಲೆ ತ್ರಿವರ್ಣ ಧ್ವಜವನ್ನು ಧರಿಸಿದ್ದುದು ವಿಶೇಷವಾಗಿತ್ತು. ನಿನ್ನೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಪ್ರಯಾಣ ಆರಂಭಿಸಿದ್ದ ಗಗನಯಾತ್ರಿಗಳು ಸುಮಾರು 23 ಗಂಟೆಗಳ ಬಳಿಕ ಭೂಮಿಗೆ ತಲುಪಿದ್ದಾರೆ. ಶುಭಾಂಶು ಶುಕ್ಲಾ , ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮಿಷನ್ ಅನ್ನು ಆಕಾಶಗಂಗಾ ಎಂದು ಹೆಸರಿಸಲಾಗಿದ್ದು, ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ಇಸ್ರೋ , ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹಾಗೂ ಆಕ್ಸಿಯಮ್ ಸ್ಪೇಸ್ ಸಂಸ್ಥೆಯ ಸಹಯೋಗದಲ್ಲಿ ಕೈಗೊಳ್ಳಲಾಗಿತ್ತು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…