ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಭಾರತೀಯ ಕಾಲಮಾನದ ಪ್ರಕಾರ ಅಪರಾಹ್ನ 3 ಗಂಟೆಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಸಮೀಪದ ಪೆಸಿಫಿಕ್ ಮಹಾಸಾಗರಕ್ಕೆ ಸುರಕ್ಷಿತವಾಗಿ ಬಂದಿಳಿಯಿತು.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳನ್ನು ಕಳೆದ ನಂತರ ಭೂಮಿಗೆ ಮರಳಿದ ಗಗನಯಾತ್ರಿಗಳನ್ನು ಬಾಹ್ಯಾಕಾಶ ನೌಕೆಯಿಂದ ಸುರಕ್ಷಿತವಾಗಿ ಹೊರತರಲಾಗಿದ್ದು, ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಅನುಕೂಲವಾಗುವಂತೆ ಅವರನ್ನು 7 ದಿನಗಳ ಪುನರ್ವಸತಿಗೆ ಕಳುಹಿಸಲಾಯಿತು. ಈ ವೇಳೆ ಭಾರತದ ಶುಭಾಂಶು ಶುಕ್ಲಾ ತಮ್ಮ ಬಾಹ್ಯಾಕಾಶ ಉಡುಪಿನ ಮೇಲೆ ತ್ರಿವರ್ಣ ಧ್ವಜವನ್ನು ಧರಿಸಿದ್ದುದು ವಿಶೇಷವಾಗಿತ್ತು. ನಿನ್ನೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಪ್ರಯಾಣ ಆರಂಭಿಸಿದ್ದ ಗಗನಯಾತ್ರಿಗಳು ಸುಮಾರು 23 ಗಂಟೆಗಳ ಬಳಿಕ ಭೂಮಿಗೆ ತಲುಪಿದ್ದಾರೆ. ಶುಭಾಂಶು ಶುಕ್ಲಾ , ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮಿಷನ್ ಅನ್ನು ಆಕಾಶಗಂಗಾ ಎಂದು ಹೆಸರಿಸಲಾಗಿದ್ದು, ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ಇಸ್ರೋ , ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹಾಗೂ ಆಕ್ಸಿಯಮ್ ಸ್ಪೇಸ್ ಸಂಸ್ಥೆಯ ಸಹಯೋಗದಲ್ಲಿ ಕೈಗೊಳ್ಳಲಾಗಿತ್ತು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…