ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಭಾರತೀಯ ಕಾಲಮಾನದ ಪ್ರಕಾರ ಅಪರಾಹ್ನ 3 ಗಂಟೆಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಸಮೀಪದ ಪೆಸಿಫಿಕ್ ಮಹಾಸಾಗರಕ್ಕೆ ಸುರಕ್ಷಿತವಾಗಿ ಬಂದಿಳಿಯಿತು.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳನ್ನು ಕಳೆದ ನಂತರ ಭೂಮಿಗೆ ಮರಳಿದ ಗಗನಯಾತ್ರಿಗಳನ್ನು ಬಾಹ್ಯಾಕಾಶ ನೌಕೆಯಿಂದ ಸುರಕ್ಷಿತವಾಗಿ ಹೊರತರಲಾಗಿದ್ದು, ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಅನುಕೂಲವಾಗುವಂತೆ ಅವರನ್ನು 7 ದಿನಗಳ ಪುನರ್ವಸತಿಗೆ ಕಳುಹಿಸಲಾಯಿತು. ಈ ವೇಳೆ ಭಾರತದ ಶುಭಾಂಶು ಶುಕ್ಲಾ ತಮ್ಮ ಬಾಹ್ಯಾಕಾಶ ಉಡುಪಿನ ಮೇಲೆ ತ್ರಿವರ್ಣ ಧ್ವಜವನ್ನು ಧರಿಸಿದ್ದುದು ವಿಶೇಷವಾಗಿತ್ತು. ನಿನ್ನೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಪ್ರಯಾಣ ಆರಂಭಿಸಿದ್ದ ಗಗನಯಾತ್ರಿಗಳು ಸುಮಾರು 23 ಗಂಟೆಗಳ ಬಳಿಕ ಭೂಮಿಗೆ ತಲುಪಿದ್ದಾರೆ. ಶುಭಾಂಶು ಶುಕ್ಲಾ , ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮಿಷನ್ ಅನ್ನು ಆಕಾಶಗಂಗಾ ಎಂದು ಹೆಸರಿಸಲಾಗಿದ್ದು, ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ಇಸ್ರೋ , ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹಾಗೂ ಆಕ್ಸಿಯಮ್ ಸ್ಪೇಸ್ ಸಂಸ್ಥೆಯ ಸಹಯೋಗದಲ್ಲಿ ಕೈಗೊಳ್ಳಲಾಗಿತ್ತು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…