ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು ಒಳಗೊಂಡ ಅಕ್ಸಿಯಂ-4 ಮಿಷನ್ ಕೆ ಭೂಮಿಗೆ ಮರು ಯಾನ ಆರಂಭಿಸಲಿದೆ. ಈ ಕುರಿತು ನಾಸಾ ಮಾಹಿತಿ ನೀಡಿದ್ದು, ಶುಭಾಂಶು ಶುಕ್ಲಾ ಹಾಗೂ ಉಳಿದ ಮೂವರು ಗಗನಯಾತ್ರಿಗಳು, ಸ್ಪೇಸ್ ಸೂಟ್ ಧರಿಸಿ, ಗಗನನೌಕೆಯನ್ನು ಏರಿದ್ದು, ಪ್ರಕ್ರಿಯೆ ಆರಂಭವಾಗಿದೆ.
ನಿಗದಿತ ಕಕ್ಷೆಯಲ್ಲಿ ಹಲವು ಸುತ್ತು ಹಾಕಿದ ನಂತರ ಭೂಮಿಯತ್ತ ಪ್ರಯಾಣ ಆರಂಭಿಸಲಿರುವ ಡ್ರ್ಯಾಗನ್ ನೌಕೆ ನಾಳೆ ಮಧ್ಯಾಹ್ನ 3 ಗಂಟೆಯ ವೇಳೆಗೆ ಕ್ಯಾಲಿಫೋರ್ನಿಯಾದ ಕಡಲ ತೀರಕ್ಕೆ ಬಂದಿಳಿಯಲಿದೆ. ಗ್ರೂಪ್ ಕ್ಯಾಪ್ಟನ್ ಶುಕ್ಲಾ 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಾರ್ಯನಿರ್ವಹಿಸಿದ್ದು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರಥಮ ಭಾರತೀಯರಾಗಿದ್ದಾರೆ. ಭೂಮಿಗೆ ಮರುಪಯಣ ಆರಂಭಿಸುವ ಮುನ್ನ ಶುಭಾಂಶು ಶುಕ್ಲಾ ಸಂದೇಶ ರವಾನಿಸಿದ್ದು, ಇಂದಿನ ಭಾರತ ಬಾಹ್ಯಾಕಾಶ ವಲಯದಲ್ಲಿ ಮಹತ್ವಾಕಾಂಕ್ಷಿಯಾಗಿದೆ. ಇಂದಿನ ಭಾರತ ಹೆಚ್ಚು ಆತ್ಮವಿಶ್ವಾಸ ಹೊಂದಿದೆ, ಹೆಮ್ಮೆಯಿಂದ ಕೂಡಿದೆ. ಈ ಎಲ್ಲಾ ಕಾರಣಗಳಿಂದ ಮತ್ತೊಮ್ಮೆ ಭಾರತ “ಸಾರೇ ಜಹಾಸೇ ಅಚ್ಛಾ” ಎಂದು ಹೇಳಲು ಬಯಸುವುದಾಗಿ ತಿಳಿಸಿದ್ದಾರೆ. 1984ರಲ್ಲಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ನಂತರ ಬಾಹ್ಯಾಕಾಶಕ್ಕೆ ತೆರಳಿದ ಎರಡನೇ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಈ ಯಾನ ಭಾರತದ ಮಾನವ ಬಾಹ್ಯಾಕಾಶ ಯಾನ ’ಗಗನ್ಯಾನ’ ಯೋಜನೆಗೆ ಮೊದಲ ಪ್ರಮುಖ ಹಾಗೂ ದೃಢ ಹೆಜ್ಜೆಯಾಗಿದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…