Advertisement
MIRROR FOCUS

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

Share

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು ಒಳಗೊಂಡ ಅಕ್ಸಿಯಂ-4 ಮಿಷನ್‌ ಕೆ ಭೂಮಿಗೆ  ಮರು ಯಾನ  ಆರಂಭಿಸಲಿದೆ. ಈ ಕುರಿತು ನಾಸಾ ಮಾಹಿತಿ ನೀಡಿದ್ದು, ಶುಭಾಂಶು ಶುಕ್ಲಾ  ಹಾಗೂ  ಉಳಿದ ಮೂವರು ಗಗನಯಾತ್ರಿಗಳು, ಸ್ಪೇಸ್ ಸೂಟ್ ಧರಿಸಿ, ಗಗನನೌಕೆಯನ್ನು ಏರಿದ್ದು, ಪ್ರಕ್ರಿಯೆ ಆರಂಭವಾಗಿದೆ.

ನಿಗದಿತ ಕಕ್ಷೆಯಲ್ಲಿ ಹಲವು ಸುತ್ತು ಹಾಕಿದ ನಂತರ ಭೂಮಿಯತ್ತ ಪ್ರಯಾಣ ಆರಂಭಿಸಲಿರುವ ಡ್ರ್ಯಾಗನ್ ನೌಕೆ  ನಾಳೆ ಮಧ್ಯಾಹ್ನ 3 ಗಂಟೆಯ ವೇಳೆಗೆ ಕ್ಯಾಲಿಫೋರ್ನಿಯಾದ  ಕಡಲ ತೀರಕ್ಕೆ ಬಂದಿಳಿಯಲಿದೆ. ಗ್ರೂಪ್ ಕ್ಯಾಪ್ಟನ್ ಶುಕ್ಲಾ 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಾರ್ಯನಿರ್ವಹಿಸಿದ್ದು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರಥಮ ಭಾರತೀಯರಾಗಿದ್ದಾರೆ. ಭೂಮಿಗೆ ಮರುಪಯಣ ಆರಂಭಿಸುವ ಮುನ್ನ ಶುಭಾಂಶು ಶುಕ್ಲಾ ಸಂದೇಶ ರವಾನಿಸಿದ್ದು, ಇಂದಿನ ಭಾರತ ಬಾಹ್ಯಾಕಾಶ ವಲಯದಲ್ಲಿ ಮಹತ್ವಾಕಾಂಕ್ಷಿಯಾಗಿದೆ. ಇಂದಿನ ಭಾರತ ಹೆಚ್ಚು ಆತ್ಮವಿಶ್ವಾಸ ಹೊಂದಿದೆ, ಹೆಮ್ಮೆಯಿಂದ ಕೂಡಿದೆ. ಈ ಎಲ್ಲಾ ಕಾರಣಗಳಿಂದ ಮತ್ತೊಮ್ಮೆ ಭಾರತ “ಸಾರೇ ಜಹಾಸೇ ಅಚ್ಛಾ” ಎಂದು ಹೇಳಲು ಬಯಸುವುದಾಗಿ ತಿಳಿಸಿದ್ದಾರೆ.  1984ರಲ್ಲಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ನಂತರ ಬಾಹ್ಯಾಕಾಶಕ್ಕೆ ತೆರಳಿದ ಎರಡನೇ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಈ ಯಾನ ಭಾರತದ ಮಾನವ ಬಾಹ್ಯಾಕಾಶ ಯಾನ ’ಗಗನ್‌ಯಾನ’ ಯೋಜನೆಗೆ ಮೊದಲ ಪ್ರಮುಖ ಹಾಗೂ ದೃಢ ಹೆಜ್ಜೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

19 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago