Advertisement
MIRROR FOCUS

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

Share

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು ಒಳಗೊಂಡ ಅಕ್ಸಿಯಂ-4 ಮಿಷನ್‌ ಕೆ ಭೂಮಿಗೆ  ಮರು ಯಾನ  ಆರಂಭಿಸಲಿದೆ. ಈ ಕುರಿತು ನಾಸಾ ಮಾಹಿತಿ ನೀಡಿದ್ದು, ಶುಭಾಂಶು ಶುಕ್ಲಾ  ಹಾಗೂ  ಉಳಿದ ಮೂವರು ಗಗನಯಾತ್ರಿಗಳು, ಸ್ಪೇಸ್ ಸೂಟ್ ಧರಿಸಿ, ಗಗನನೌಕೆಯನ್ನು ಏರಿದ್ದು, ಪ್ರಕ್ರಿಯೆ ಆರಂಭವಾಗಿದೆ.

ನಿಗದಿತ ಕಕ್ಷೆಯಲ್ಲಿ ಹಲವು ಸುತ್ತು ಹಾಕಿದ ನಂತರ ಭೂಮಿಯತ್ತ ಪ್ರಯಾಣ ಆರಂಭಿಸಲಿರುವ ಡ್ರ್ಯಾಗನ್ ನೌಕೆ  ನಾಳೆ ಮಧ್ಯಾಹ್ನ 3 ಗಂಟೆಯ ವೇಳೆಗೆ ಕ್ಯಾಲಿಫೋರ್ನಿಯಾದ  ಕಡಲ ತೀರಕ್ಕೆ ಬಂದಿಳಿಯಲಿದೆ. ಗ್ರೂಪ್ ಕ್ಯಾಪ್ಟನ್ ಶುಕ್ಲಾ 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಾರ್ಯನಿರ್ವಹಿಸಿದ್ದು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರಥಮ ಭಾರತೀಯರಾಗಿದ್ದಾರೆ. ಭೂಮಿಗೆ ಮರುಪಯಣ ಆರಂಭಿಸುವ ಮುನ್ನ ಶುಭಾಂಶು ಶುಕ್ಲಾ ಸಂದೇಶ ರವಾನಿಸಿದ್ದು, ಇಂದಿನ ಭಾರತ ಬಾಹ್ಯಾಕಾಶ ವಲಯದಲ್ಲಿ ಮಹತ್ವಾಕಾಂಕ್ಷಿಯಾಗಿದೆ. ಇಂದಿನ ಭಾರತ ಹೆಚ್ಚು ಆತ್ಮವಿಶ್ವಾಸ ಹೊಂದಿದೆ, ಹೆಮ್ಮೆಯಿಂದ ಕೂಡಿದೆ. ಈ ಎಲ್ಲಾ ಕಾರಣಗಳಿಂದ ಮತ್ತೊಮ್ಮೆ ಭಾರತ “ಸಾರೇ ಜಹಾಸೇ ಅಚ್ಛಾ” ಎಂದು ಹೇಳಲು ಬಯಸುವುದಾಗಿ ತಿಳಿಸಿದ್ದಾರೆ.  1984ರಲ್ಲಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ನಂತರ ಬಾಹ್ಯಾಕಾಶಕ್ಕೆ ತೆರಳಿದ ಎರಡನೇ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಈ ಯಾನ ಭಾರತದ ಮಾನವ ಬಾಹ್ಯಾಕಾಶ ಯಾನ ’ಗಗನ್‌ಯಾನ’ ಯೋಜನೆಗೆ ಮೊದಲ ಪ್ರಮುಖ ಹಾಗೂ ದೃಢ ಹೆಜ್ಜೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

12 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

13 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

13 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

13 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

13 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

21 hours ago