ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಆಗಸ್ಟ್ ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ…….

August 2, 2024
11:11 AM

ಭಾರತದ(India) ಸ್ವಾತಂತ್ರ್ಯೋತ್ಸವ(Independence) ಆಚರಿಸುವ ಆಗಸ್ಟ್(August) ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ……. ಉಕ್ಕಿ ಹರಿಯುವ ದೇಶಪ್ರೇಮ(patriotism)………..
ಎಲ್ಲೆಲ್ಲೂ ರಾಷ್ಟ್ರಗೀತೆ(National anthem) – ರಾಷ್ಟ್ರಧ್ವಜ(Natinala flag)…….
ಜೈ ಭಾರತ್ ಘೋಷಣೆ……
ತುಂಬಾ ಸಂತೋಷ……
ಆದರೆ, ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ………

Advertisement

ಇದೇ ಬಾಯಿಗಳೇ ದ್ವೇಷ ಕಾರುವ, ರಕ್ತ ಹೀರುವ ಘೋಷಣೆ ಕೂಗುವುದು…..
ಇದೇ ಕಣ್ಣುಗಳೇ ಸಾವುಗಳನ್ನು ಸಂಭ್ರಮಿಸಿ ಕ್ರೂರತೆ ಮೆರೆಯುವುದು….
ಇದೇ ಕೈಗಳೇ ಭ್ರಷ್ಟ ಲಂಚದ ಹಣಕ್ಕೆ ಕೈಚಾಚುವುದು…..
ಇದೇ ಕಾಲುಗಳೇ ಹಣ, ಹೆಂಡ ಪಡೆದು ಮತದಾನ ಕೇಂದ್ರಕ್ಕೆ ಸಾಗುವುದು….
ಇದೇ ತೋಳುಗಳೇ ಅತ್ಯಾಚಾರಕ್ಕೆ ಬಳಸಲ್ಪಡುವುದು….
ಇದೇ ಮನಸ್ಸುಗಳೇ ಇಂದು ದೇಶದಲ್ಲಿ ಅರಾಜಕತೆ ಅಸಹಿಷ್ಣತೆ ಉಂಟು ಮಾಡುತ್ತಿರುವುದು………..
ಜನರನ್ನು ಟೀಕಿಸಿದ್ದಕ್ಕೆ ಬೇಸರವಾಗುತ್ತಿದೆಯೇ ?
ಬನ್ನಿ ನನ್ನೊಂದಿಗೆ…..

ಇಡೀ ದೇಶದ ಸರ್ಕಾರಿ ಕಚೇರಿಗಳಲ್ಲಿ, ಆಸ್ಪತ್ರೆಯಿಂದ ವಿಧಾನಸಭೆಗಳವರೆಗೆ, ಜಮೀನು ನೋಂದಣಿ ಕಚೇರಿಯಿಂದ ಮರಣ ನೋಂದಣಿ ಕಚೇರಿಯವರೆಗೆ ಲಂಚವಿಲ್ಲದೆ ಕೆಲಸವಾಗುವುದು ಅಪರೂಪ. ಒಡವೆ ಧರಿಸಿದ ಒಂಟಿ ಹೆಣ್ಣು ಇಲ್ಲಿ ಸುರಕ್ಷಿತ ಎಂದು ಹೇಳುವ ಒಂದೇ ಒಂದು ಜನನಿಬಿಡ ಬಸ್ ನಿಲ್ದಾಣ ಅಥವಾ ರೈಲು ನಿಲ್ದಾಣವನ್ನು ತೋರಿಸಿ. ಕಾನೂನು ತಜ್ಞರ ಸಲಹೆ ಪಡೆಯದೆ ಕೇವಲ ನಂಬಿಕೆಯ ಆಧಾರದ ಮೇಲೆ ಮನೆ ಅಥವಾ ಜಮೀನು ಖರೀದಿಸುವ ಧೈರ್ಯ ಎಷ್ಟು ಜನರಿಗಿದೆ.

ಒಂದು ಕಡೆ ಡ್ರಗ್ ಮಾಫಿಯಾ, ಇನ್ನೊಂದು ಕಡೆ ಲ್ಯಾಂಡ್ ಮಾಫಿಯಾ, ಕ್ಯಾಪಿಟೇಷನ್ ಮಾಫಿಯಾ, ಶುಗರ್ ಮಾಫಿಯಾ, ಗಣಿ ಮಾಫಿಯಾ, ವಾಟರ್ ಮಾಫಿಯಾ ಜೊತೆಗೆ ಜಾತಿ ಧರ್ಮ ಮುಂತಾದ ವಿಭಜಕ ಶಕ್ತಿಗಳು ಇಡೀ ಆಡಳಿತ ಯಂತ್ರವನ್ನು ನಿಯಂತ್ರಿಸುತ್ತಿವೆ. ಆದರೆ ‌ದೇಶಭಕ್ತಿ ಮಾತ್ರ ಉಕ್ಕಿ ಹರಿಯುತ್ತದೆ.  ದೇಶಭಕ್ತಿ ಕೇವಲ ಘೋಷಣೆಯಲ್ಲ. ಅದು ನಡವಳಿಕೆ.

ದುರುಳ ನಾಯಕರಿಂದ ಮಕ್ಕಳಿಗೆ ಶಾಲೆಯಲ್ಲಿ ನೀತಿ ಪಾಠ ಹೇಳಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದರೆ ಆ ಕಪಟತನದ ಮುಖವಾಡ ಮುಂದಿನ ದಿನಗಳಲ್ಲಿ ಮಕ್ಕಳಿಗೆ ತಿಳಿಯುವುದಿಲ್ಲವೇ ? ನುಡಿದಂತೆ ನಡೆಯಿರಿ ಇಲ್ಲವೇ ನಡೆದಂತೆ ನುಡಿಯಿರಿ ಅದೇ ದೇಶಪ್ರೇಮ. ಸರಳತೆ ಸಭ್ಯತೆ ಪ್ರೀತಿ ವಿಶ್ವಾಸವಿಲ್ಲದ ಪೇಪರ್ ಟೈಗರ್ ಗಳೋ, ಟಿವಿ ಟೈಗರ್ ಗಳೋ ಆಗಿ ಒಣ ವೇದಾಂತ ಹೇಳುತ್ತಾ ಪ್ರಚಾರದ ಹಂಗಿಗೆ ಬಿದ್ದು ಬುದ್ದಿವಂತರೆಂಬ ಭ್ರಮೆಗೆ ಒಳಗಾಗಿ ವ್ಯಕ್ತಿತ್ವವೇ ಇಲ್ಲದ ಟೊಳ್ಳು ದೇಶಪ್ರೇಮ ಅಪಾಯಕಾರಿ. ಮಾತಿನರಮನೆಯಲ್ಲಿ ಅರಳುವುದು ಮುಖವಾಡ. ನರನಾಡಿಗಳಲ್ಲಿ ಸಮಾನತೆ ಸೌಹಾರ್ಧತೆ ಅಡಗಿರುವುದು ದೇಶಪ್ರೇಮ. ವಂದೇ ಮಾತರಂ ಎಂದು ಕೂಗುವುದು ದೇವಸ್ಥಾನಗಳಿಗೆ ಪ್ರವೇಶ ನಿರಾಕರಿಸುವುದು. ವಂದೇ ಮಾತರಂ ಎನ್ನುವುದು ಮಠದಲ್ಲಿ ಪಂಕ್ತಿಬೇದ ಮಾಡುವುದು ಮತ್ತು ಅದನ್ನು ಸಮರ್ಥಿಸುವುದು. ವಂದೇ ಮಾತರಂ ಎನ್ನುವುದು ಜಾತಿ ಸರ್ಟಿಫಿಕೇಟ್ ಹಂಚುವುದು. ವ್ಯಕ್ತಿ ಸ್ವಾತಂತ್ರ್ಯ ಗೌರವಿಸದೆ ಇನ್ನೊಬ್ಬರನ್ನು ಹಂಗಿಸುವುದು. ಛೆ……. ನಮ್ಮ ನಡವಳಿಕೆ – ವರ್ತನೆ – ದಿನನಿತ್ಯದ ಒಳ್ಳೆಯ, ಮೌಲ್ಯಯುತ ಚಟುವಟಿಕೆಗಳೇ ನಮ್ಮ ದೇಶಪ್ರೇಮ. ಕೇವಲ ಜೈ ಭಾರತ್ ಘೋಷಣೆಯಲ್ಲ…… ಒಳ್ಳೆಯವರಾಗಿ, ಒಳ್ಳೆಯದನ್ನು ಪ್ರೋತ್ಸಾಹಿಸಿ, ಕೆಟ್ಟದ್ದನ್ನು ತಿರಸ್ಕರಿಸಿ…….

ಬರಹ :
ವಿವೇಕಾನಂದ. ಎಚ್.ಕೆ.
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

ಇದನ್ನೂ ಓದಿ

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು
ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ
March 19, 2026
8:15 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror