Opinion

ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಆಗಸ್ಟ್ ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ…….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ(India) ಸ್ವಾತಂತ್ರ್ಯೋತ್ಸವ(Independence) ಆಚರಿಸುವ ಆಗಸ್ಟ್(August) ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ……. ಉಕ್ಕಿ ಹರಿಯುವ ದೇಶಪ್ರೇಮ(patriotism)………..
ಎಲ್ಲೆಲ್ಲೂ ರಾಷ್ಟ್ರಗೀತೆ(National anthem) – ರಾಷ್ಟ್ರಧ್ವಜ(Natinala flag)…….
ಜೈ ಭಾರತ್ ಘೋಷಣೆ……
ತುಂಬಾ ಸಂತೋಷ……
ಆದರೆ, ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ………

Advertisement

ಇದೇ ಬಾಯಿಗಳೇ ದ್ವೇಷ ಕಾರುವ, ರಕ್ತ ಹೀರುವ ಘೋಷಣೆ ಕೂಗುವುದು…..
ಇದೇ ಕಣ್ಣುಗಳೇ ಸಾವುಗಳನ್ನು ಸಂಭ್ರಮಿಸಿ ಕ್ರೂರತೆ ಮೆರೆಯುವುದು….
ಇದೇ ಕೈಗಳೇ ಭ್ರಷ್ಟ ಲಂಚದ ಹಣಕ್ಕೆ ಕೈಚಾಚುವುದು…..
ಇದೇ ಕಾಲುಗಳೇ ಹಣ, ಹೆಂಡ ಪಡೆದು ಮತದಾನ ಕೇಂದ್ರಕ್ಕೆ ಸಾಗುವುದು….
ಇದೇ ತೋಳುಗಳೇ ಅತ್ಯಾಚಾರಕ್ಕೆ ಬಳಸಲ್ಪಡುವುದು….
ಇದೇ ಮನಸ್ಸುಗಳೇ ಇಂದು ದೇಶದಲ್ಲಿ ಅರಾಜಕತೆ ಅಸಹಿಷ್ಣತೆ ಉಂಟು ಮಾಡುತ್ತಿರುವುದು………..
ಜನರನ್ನು ಟೀಕಿಸಿದ್ದಕ್ಕೆ ಬೇಸರವಾಗುತ್ತಿದೆಯೇ ?
ಬನ್ನಿ ನನ್ನೊಂದಿಗೆ…..

ಇಡೀ ದೇಶದ ಸರ್ಕಾರಿ ಕಚೇರಿಗಳಲ್ಲಿ, ಆಸ್ಪತ್ರೆಯಿಂದ ವಿಧಾನಸಭೆಗಳವರೆಗೆ, ಜಮೀನು ನೋಂದಣಿ ಕಚೇರಿಯಿಂದ ಮರಣ ನೋಂದಣಿ ಕಚೇರಿಯವರೆಗೆ ಲಂಚವಿಲ್ಲದೆ ಕೆಲಸವಾಗುವುದು ಅಪರೂಪ. ಒಡವೆ ಧರಿಸಿದ ಒಂಟಿ ಹೆಣ್ಣು ಇಲ್ಲಿ ಸುರಕ್ಷಿತ ಎಂದು ಹೇಳುವ ಒಂದೇ ಒಂದು ಜನನಿಬಿಡ ಬಸ್ ನಿಲ್ದಾಣ ಅಥವಾ ರೈಲು ನಿಲ್ದಾಣವನ್ನು ತೋರಿಸಿ. ಕಾನೂನು ತಜ್ಞರ ಸಲಹೆ ಪಡೆಯದೆ ಕೇವಲ ನಂಬಿಕೆಯ ಆಧಾರದ ಮೇಲೆ ಮನೆ ಅಥವಾ ಜಮೀನು ಖರೀದಿಸುವ ಧೈರ್ಯ ಎಷ್ಟು ಜನರಿಗಿದೆ.

ಒಂದು ಕಡೆ ಡ್ರಗ್ ಮಾಫಿಯಾ, ಇನ್ನೊಂದು ಕಡೆ ಲ್ಯಾಂಡ್ ಮಾಫಿಯಾ, ಕ್ಯಾಪಿಟೇಷನ್ ಮಾಫಿಯಾ, ಶುಗರ್ ಮಾಫಿಯಾ, ಗಣಿ ಮಾಫಿಯಾ, ವಾಟರ್ ಮಾಫಿಯಾ ಜೊತೆಗೆ ಜಾತಿ ಧರ್ಮ ಮುಂತಾದ ವಿಭಜಕ ಶಕ್ತಿಗಳು ಇಡೀ ಆಡಳಿತ ಯಂತ್ರವನ್ನು ನಿಯಂತ್ರಿಸುತ್ತಿವೆ. ಆದರೆ ‌ದೇಶಭಕ್ತಿ ಮಾತ್ರ ಉಕ್ಕಿ ಹರಿಯುತ್ತದೆ.  ದೇಶಭಕ್ತಿ ಕೇವಲ ಘೋಷಣೆಯಲ್ಲ. ಅದು ನಡವಳಿಕೆ.

ದುರುಳ ನಾಯಕರಿಂದ ಮಕ್ಕಳಿಗೆ ಶಾಲೆಯಲ್ಲಿ ನೀತಿ ಪಾಠ ಹೇಳಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದರೆ ಆ ಕಪಟತನದ ಮುಖವಾಡ ಮುಂದಿನ ದಿನಗಳಲ್ಲಿ ಮಕ್ಕಳಿಗೆ ತಿಳಿಯುವುದಿಲ್ಲವೇ ? ನುಡಿದಂತೆ ನಡೆಯಿರಿ ಇಲ್ಲವೇ ನಡೆದಂತೆ ನುಡಿಯಿರಿ ಅದೇ ದೇಶಪ್ರೇಮ. ಸರಳತೆ ಸಭ್ಯತೆ ಪ್ರೀತಿ ವಿಶ್ವಾಸವಿಲ್ಲದ ಪೇಪರ್ ಟೈಗರ್ ಗಳೋ, ಟಿವಿ ಟೈಗರ್ ಗಳೋ ಆಗಿ ಒಣ ವೇದಾಂತ ಹೇಳುತ್ತಾ ಪ್ರಚಾರದ ಹಂಗಿಗೆ ಬಿದ್ದು ಬುದ್ದಿವಂತರೆಂಬ ಭ್ರಮೆಗೆ ಒಳಗಾಗಿ ವ್ಯಕ್ತಿತ್ವವೇ ಇಲ್ಲದ ಟೊಳ್ಳು ದೇಶಪ್ರೇಮ ಅಪಾಯಕಾರಿ. ಮಾತಿನರಮನೆಯಲ್ಲಿ ಅರಳುವುದು ಮುಖವಾಡ. ನರನಾಡಿಗಳಲ್ಲಿ ಸಮಾನತೆ ಸೌಹಾರ್ಧತೆ ಅಡಗಿರುವುದು ದೇಶಪ್ರೇಮ. ವಂದೇ ಮಾತರಂ ಎಂದು ಕೂಗುವುದು ದೇವಸ್ಥಾನಗಳಿಗೆ ಪ್ರವೇಶ ನಿರಾಕರಿಸುವುದು. ವಂದೇ ಮಾತರಂ ಎನ್ನುವುದು ಮಠದಲ್ಲಿ ಪಂಕ್ತಿಬೇದ ಮಾಡುವುದು ಮತ್ತು ಅದನ್ನು ಸಮರ್ಥಿಸುವುದು. ವಂದೇ ಮಾತರಂ ಎನ್ನುವುದು ಜಾತಿ ಸರ್ಟಿಫಿಕೇಟ್ ಹಂಚುವುದು. ವ್ಯಕ್ತಿ ಸ್ವಾತಂತ್ರ್ಯ ಗೌರವಿಸದೆ ಇನ್ನೊಬ್ಬರನ್ನು ಹಂಗಿಸುವುದು. ಛೆ……. ನಮ್ಮ ನಡವಳಿಕೆ – ವರ್ತನೆ – ದಿನನಿತ್ಯದ ಒಳ್ಳೆಯ, ಮೌಲ್ಯಯುತ ಚಟುವಟಿಕೆಗಳೇ ನಮ್ಮ ದೇಶಪ್ರೇಮ. ಕೇವಲ ಜೈ ಭಾರತ್ ಘೋಷಣೆಯಲ್ಲ…… ಒಳ್ಳೆಯವರಾಗಿ, ಒಳ್ಳೆಯದನ್ನು ಪ್ರೋತ್ಸಾಹಿಸಿ, ಕೆಟ್ಟದ್ದನ್ನು ತಿರಸ್ಕರಿಸಿ…….

ಬರಹ :
ವಿವೇಕಾನಂದ. ಎಚ್.ಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

12 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

12 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

21 hours ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

1 day ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

1 day ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago