Advertisement
Opinion

ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಆಗಸ್ಟ್ ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ…….

Share

ಭಾರತದ(India) ಸ್ವಾತಂತ್ರ್ಯೋತ್ಸವ(Independence) ಆಚರಿಸುವ ಆಗಸ್ಟ್(August) ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ……. ಉಕ್ಕಿ ಹರಿಯುವ ದೇಶಪ್ರೇಮ(patriotism)………..
ಎಲ್ಲೆಲ್ಲೂ ರಾಷ್ಟ್ರಗೀತೆ(National anthem) – ರಾಷ್ಟ್ರಧ್ವಜ(Natinala flag)…….
ಜೈ ಭಾರತ್ ಘೋಷಣೆ……
ತುಂಬಾ ಸಂತೋಷ……
ಆದರೆ, ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ………

ಇದೇ ಬಾಯಿಗಳೇ ದ್ವೇಷ ಕಾರುವ, ರಕ್ತ ಹೀರುವ ಘೋಷಣೆ ಕೂಗುವುದು…..
ಇದೇ ಕಣ್ಣುಗಳೇ ಸಾವುಗಳನ್ನು ಸಂಭ್ರಮಿಸಿ ಕ್ರೂರತೆ ಮೆರೆಯುವುದು….
ಇದೇ ಕೈಗಳೇ ಭ್ರಷ್ಟ ಲಂಚದ ಹಣಕ್ಕೆ ಕೈಚಾಚುವುದು…..
ಇದೇ ಕಾಲುಗಳೇ ಹಣ, ಹೆಂಡ ಪಡೆದು ಮತದಾನ ಕೇಂದ್ರಕ್ಕೆ ಸಾಗುವುದು….
ಇದೇ ತೋಳುಗಳೇ ಅತ್ಯಾಚಾರಕ್ಕೆ ಬಳಸಲ್ಪಡುವುದು….
ಇದೇ ಮನಸ್ಸುಗಳೇ ಇಂದು ದೇಶದಲ್ಲಿ ಅರಾಜಕತೆ ಅಸಹಿಷ್ಣತೆ ಉಂಟು ಮಾಡುತ್ತಿರುವುದು………..
ಜನರನ್ನು ಟೀಕಿಸಿದ್ದಕ್ಕೆ ಬೇಸರವಾಗುತ್ತಿದೆಯೇ ?
ಬನ್ನಿ ನನ್ನೊಂದಿಗೆ…..

ಇಡೀ ದೇಶದ ಸರ್ಕಾರಿ ಕಚೇರಿಗಳಲ್ಲಿ, ಆಸ್ಪತ್ರೆಯಿಂದ ವಿಧಾನಸಭೆಗಳವರೆಗೆ, ಜಮೀನು ನೋಂದಣಿ ಕಚೇರಿಯಿಂದ ಮರಣ ನೋಂದಣಿ ಕಚೇರಿಯವರೆಗೆ ಲಂಚವಿಲ್ಲದೆ ಕೆಲಸವಾಗುವುದು ಅಪರೂಪ. ಒಡವೆ ಧರಿಸಿದ ಒಂಟಿ ಹೆಣ್ಣು ಇಲ್ಲಿ ಸುರಕ್ಷಿತ ಎಂದು ಹೇಳುವ ಒಂದೇ ಒಂದು ಜನನಿಬಿಡ ಬಸ್ ನಿಲ್ದಾಣ ಅಥವಾ ರೈಲು ನಿಲ್ದಾಣವನ್ನು ತೋರಿಸಿ. ಕಾನೂನು ತಜ್ಞರ ಸಲಹೆ ಪಡೆಯದೆ ಕೇವಲ ನಂಬಿಕೆಯ ಆಧಾರದ ಮೇಲೆ ಮನೆ ಅಥವಾ ಜಮೀನು ಖರೀದಿಸುವ ಧೈರ್ಯ ಎಷ್ಟು ಜನರಿಗಿದೆ.

ಒಂದು ಕಡೆ ಡ್ರಗ್ ಮಾಫಿಯಾ, ಇನ್ನೊಂದು ಕಡೆ ಲ್ಯಾಂಡ್ ಮಾಫಿಯಾ, ಕ್ಯಾಪಿಟೇಷನ್ ಮಾಫಿಯಾ, ಶುಗರ್ ಮಾಫಿಯಾ, ಗಣಿ ಮಾಫಿಯಾ, ವಾಟರ್ ಮಾಫಿಯಾ ಜೊತೆಗೆ ಜಾತಿ ಧರ್ಮ ಮುಂತಾದ ವಿಭಜಕ ಶಕ್ತಿಗಳು ಇಡೀ ಆಡಳಿತ ಯಂತ್ರವನ್ನು ನಿಯಂತ್ರಿಸುತ್ತಿವೆ. ಆದರೆ ‌ದೇಶಭಕ್ತಿ ಮಾತ್ರ ಉಕ್ಕಿ ಹರಿಯುತ್ತದೆ.  ದೇಶಭಕ್ತಿ ಕೇವಲ ಘೋಷಣೆಯಲ್ಲ. ಅದು ನಡವಳಿಕೆ.

ದುರುಳ ನಾಯಕರಿಂದ ಮಕ್ಕಳಿಗೆ ಶಾಲೆಯಲ್ಲಿ ನೀತಿ ಪಾಠ ಹೇಳಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದರೆ ಆ ಕಪಟತನದ ಮುಖವಾಡ ಮುಂದಿನ ದಿನಗಳಲ್ಲಿ ಮಕ್ಕಳಿಗೆ ತಿಳಿಯುವುದಿಲ್ಲವೇ ? ನುಡಿದಂತೆ ನಡೆಯಿರಿ ಇಲ್ಲವೇ ನಡೆದಂತೆ ನುಡಿಯಿರಿ ಅದೇ ದೇಶಪ್ರೇಮ. ಸರಳತೆ ಸಭ್ಯತೆ ಪ್ರೀತಿ ವಿಶ್ವಾಸವಿಲ್ಲದ ಪೇಪರ್ ಟೈಗರ್ ಗಳೋ, ಟಿವಿ ಟೈಗರ್ ಗಳೋ ಆಗಿ ಒಣ ವೇದಾಂತ ಹೇಳುತ್ತಾ ಪ್ರಚಾರದ ಹಂಗಿಗೆ ಬಿದ್ದು ಬುದ್ದಿವಂತರೆಂಬ ಭ್ರಮೆಗೆ ಒಳಗಾಗಿ ವ್ಯಕ್ತಿತ್ವವೇ ಇಲ್ಲದ ಟೊಳ್ಳು ದೇಶಪ್ರೇಮ ಅಪಾಯಕಾರಿ. ಮಾತಿನರಮನೆಯಲ್ಲಿ ಅರಳುವುದು ಮುಖವಾಡ. ನರನಾಡಿಗಳಲ್ಲಿ ಸಮಾನತೆ ಸೌಹಾರ್ಧತೆ ಅಡಗಿರುವುದು ದೇಶಪ್ರೇಮ. ವಂದೇ ಮಾತರಂ ಎಂದು ಕೂಗುವುದು ದೇವಸ್ಥಾನಗಳಿಗೆ ಪ್ರವೇಶ ನಿರಾಕರಿಸುವುದು. ವಂದೇ ಮಾತರಂ ಎನ್ನುವುದು ಮಠದಲ್ಲಿ ಪಂಕ್ತಿಬೇದ ಮಾಡುವುದು ಮತ್ತು ಅದನ್ನು ಸಮರ್ಥಿಸುವುದು. ವಂದೇ ಮಾತರಂ ಎನ್ನುವುದು ಜಾತಿ ಸರ್ಟಿಫಿಕೇಟ್ ಹಂಚುವುದು. ವ್ಯಕ್ತಿ ಸ್ವಾತಂತ್ರ್ಯ ಗೌರವಿಸದೆ ಇನ್ನೊಬ್ಬರನ್ನು ಹಂಗಿಸುವುದು. ಛೆ……. ನಮ್ಮ ನಡವಳಿಕೆ – ವರ್ತನೆ – ದಿನನಿತ್ಯದ ಒಳ್ಳೆಯ, ಮೌಲ್ಯಯುತ ಚಟುವಟಿಕೆಗಳೇ ನಮ್ಮ ದೇಶಪ್ರೇಮ. ಕೇವಲ ಜೈ ಭಾರತ್ ಘೋಷಣೆಯಲ್ಲ…… ಒಳ್ಳೆಯವರಾಗಿ, ಒಳ್ಳೆಯದನ್ನು ಪ್ರೋತ್ಸಾಹಿಸಿ, ಕೆಟ್ಟದ್ದನ್ನು ತಿರಸ್ಕರಿಸಿ…….

ಬರಹ :
ವಿವೇಕಾನಂದ. ಎಚ್.ಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

6 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

7 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

13 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

14 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

16 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

16 hours ago