Advertisement
Opinion

ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಆಗಸ್ಟ್ ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ…….

Share

ಭಾರತದ(India) ಸ್ವಾತಂತ್ರ್ಯೋತ್ಸವ(Independence) ಆಚರಿಸುವ ಆಗಸ್ಟ್(August) ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ……. ಉಕ್ಕಿ ಹರಿಯುವ ದೇಶಪ್ರೇಮ(patriotism)………..
ಎಲ್ಲೆಲ್ಲೂ ರಾಷ್ಟ್ರಗೀತೆ(National anthem) – ರಾಷ್ಟ್ರಧ್ವಜ(Natinala flag)…….
ಜೈ ಭಾರತ್ ಘೋಷಣೆ……
ತುಂಬಾ ಸಂತೋಷ……
ಆದರೆ, ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ………

ಇದೇ ಬಾಯಿಗಳೇ ದ್ವೇಷ ಕಾರುವ, ರಕ್ತ ಹೀರುವ ಘೋಷಣೆ ಕೂಗುವುದು…..
ಇದೇ ಕಣ್ಣುಗಳೇ ಸಾವುಗಳನ್ನು ಸಂಭ್ರಮಿಸಿ ಕ್ರೂರತೆ ಮೆರೆಯುವುದು….
ಇದೇ ಕೈಗಳೇ ಭ್ರಷ್ಟ ಲಂಚದ ಹಣಕ್ಕೆ ಕೈಚಾಚುವುದು…..
ಇದೇ ಕಾಲುಗಳೇ ಹಣ, ಹೆಂಡ ಪಡೆದು ಮತದಾನ ಕೇಂದ್ರಕ್ಕೆ ಸಾಗುವುದು….
ಇದೇ ತೋಳುಗಳೇ ಅತ್ಯಾಚಾರಕ್ಕೆ ಬಳಸಲ್ಪಡುವುದು….
ಇದೇ ಮನಸ್ಸುಗಳೇ ಇಂದು ದೇಶದಲ್ಲಿ ಅರಾಜಕತೆ ಅಸಹಿಷ್ಣತೆ ಉಂಟು ಮಾಡುತ್ತಿರುವುದು………..
ಜನರನ್ನು ಟೀಕಿಸಿದ್ದಕ್ಕೆ ಬೇಸರವಾಗುತ್ತಿದೆಯೇ ?
ಬನ್ನಿ ನನ್ನೊಂದಿಗೆ…..

ಇಡೀ ದೇಶದ ಸರ್ಕಾರಿ ಕಚೇರಿಗಳಲ್ಲಿ, ಆಸ್ಪತ್ರೆಯಿಂದ ವಿಧಾನಸಭೆಗಳವರೆಗೆ, ಜಮೀನು ನೋಂದಣಿ ಕಚೇರಿಯಿಂದ ಮರಣ ನೋಂದಣಿ ಕಚೇರಿಯವರೆಗೆ ಲಂಚವಿಲ್ಲದೆ ಕೆಲಸವಾಗುವುದು ಅಪರೂಪ. ಒಡವೆ ಧರಿಸಿದ ಒಂಟಿ ಹೆಣ್ಣು ಇಲ್ಲಿ ಸುರಕ್ಷಿತ ಎಂದು ಹೇಳುವ ಒಂದೇ ಒಂದು ಜನನಿಬಿಡ ಬಸ್ ನಿಲ್ದಾಣ ಅಥವಾ ರೈಲು ನಿಲ್ದಾಣವನ್ನು ತೋರಿಸಿ. ಕಾನೂನು ತಜ್ಞರ ಸಲಹೆ ಪಡೆಯದೆ ಕೇವಲ ನಂಬಿಕೆಯ ಆಧಾರದ ಮೇಲೆ ಮನೆ ಅಥವಾ ಜಮೀನು ಖರೀದಿಸುವ ಧೈರ್ಯ ಎಷ್ಟು ಜನರಿಗಿದೆ.

ಒಂದು ಕಡೆ ಡ್ರಗ್ ಮಾಫಿಯಾ, ಇನ್ನೊಂದು ಕಡೆ ಲ್ಯಾಂಡ್ ಮಾಫಿಯಾ, ಕ್ಯಾಪಿಟೇಷನ್ ಮಾಫಿಯಾ, ಶುಗರ್ ಮಾಫಿಯಾ, ಗಣಿ ಮಾಫಿಯಾ, ವಾಟರ್ ಮಾಫಿಯಾ ಜೊತೆಗೆ ಜಾತಿ ಧರ್ಮ ಮುಂತಾದ ವಿಭಜಕ ಶಕ್ತಿಗಳು ಇಡೀ ಆಡಳಿತ ಯಂತ್ರವನ್ನು ನಿಯಂತ್ರಿಸುತ್ತಿವೆ. ಆದರೆ ‌ದೇಶಭಕ್ತಿ ಮಾತ್ರ ಉಕ್ಕಿ ಹರಿಯುತ್ತದೆ.  ದೇಶಭಕ್ತಿ ಕೇವಲ ಘೋಷಣೆಯಲ್ಲ. ಅದು ನಡವಳಿಕೆ.

ದುರುಳ ನಾಯಕರಿಂದ ಮಕ್ಕಳಿಗೆ ಶಾಲೆಯಲ್ಲಿ ನೀತಿ ಪಾಠ ಹೇಳಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದರೆ ಆ ಕಪಟತನದ ಮುಖವಾಡ ಮುಂದಿನ ದಿನಗಳಲ್ಲಿ ಮಕ್ಕಳಿಗೆ ತಿಳಿಯುವುದಿಲ್ಲವೇ ? ನುಡಿದಂತೆ ನಡೆಯಿರಿ ಇಲ್ಲವೇ ನಡೆದಂತೆ ನುಡಿಯಿರಿ ಅದೇ ದೇಶಪ್ರೇಮ. ಸರಳತೆ ಸಭ್ಯತೆ ಪ್ರೀತಿ ವಿಶ್ವಾಸವಿಲ್ಲದ ಪೇಪರ್ ಟೈಗರ್ ಗಳೋ, ಟಿವಿ ಟೈಗರ್ ಗಳೋ ಆಗಿ ಒಣ ವೇದಾಂತ ಹೇಳುತ್ತಾ ಪ್ರಚಾರದ ಹಂಗಿಗೆ ಬಿದ್ದು ಬುದ್ದಿವಂತರೆಂಬ ಭ್ರಮೆಗೆ ಒಳಗಾಗಿ ವ್ಯಕ್ತಿತ್ವವೇ ಇಲ್ಲದ ಟೊಳ್ಳು ದೇಶಪ್ರೇಮ ಅಪಾಯಕಾರಿ. ಮಾತಿನರಮನೆಯಲ್ಲಿ ಅರಳುವುದು ಮುಖವಾಡ. ನರನಾಡಿಗಳಲ್ಲಿ ಸಮಾನತೆ ಸೌಹಾರ್ಧತೆ ಅಡಗಿರುವುದು ದೇಶಪ್ರೇಮ. ವಂದೇ ಮಾತರಂ ಎಂದು ಕೂಗುವುದು ದೇವಸ್ಥಾನಗಳಿಗೆ ಪ್ರವೇಶ ನಿರಾಕರಿಸುವುದು. ವಂದೇ ಮಾತರಂ ಎನ್ನುವುದು ಮಠದಲ್ಲಿ ಪಂಕ್ತಿಬೇದ ಮಾಡುವುದು ಮತ್ತು ಅದನ್ನು ಸಮರ್ಥಿಸುವುದು. ವಂದೇ ಮಾತರಂ ಎನ್ನುವುದು ಜಾತಿ ಸರ್ಟಿಫಿಕೇಟ್ ಹಂಚುವುದು. ವ್ಯಕ್ತಿ ಸ್ವಾತಂತ್ರ್ಯ ಗೌರವಿಸದೆ ಇನ್ನೊಬ್ಬರನ್ನು ಹಂಗಿಸುವುದು. ಛೆ……. ನಮ್ಮ ನಡವಳಿಕೆ – ವರ್ತನೆ – ದಿನನಿತ್ಯದ ಒಳ್ಳೆಯ, ಮೌಲ್ಯಯುತ ಚಟುವಟಿಕೆಗಳೇ ನಮ್ಮ ದೇಶಪ್ರೇಮ. ಕೇವಲ ಜೈ ಭಾರತ್ ಘೋಷಣೆಯಲ್ಲ…… ಒಳ್ಳೆಯವರಾಗಿ, ಒಳ್ಳೆಯದನ್ನು ಪ್ರೋತ್ಸಾಹಿಸಿ, ಕೆಟ್ಟದ್ದನ್ನು ತಿರಸ್ಕರಿಸಿ…….

ಬರಹ :
ವಿವೇಕಾನಂದ. ಎಚ್.ಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

18 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago