ಕೊರೋನೋತ್ತರದಲ್ಲಿ ಭಾರತದ ಹಳ್ಳಿಗಳ ಸ್ಥಿತಿ ಬದಲಾಗಬೇಕಲೇಬೇಕಾದ ಅನಿವಾರ್ಯವಿದೆ. ಹೀಗಾಗಿ ಪ್ರತೀ ಹಳ್ಳಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕಿದೆ. ಇದಕ್ಕಾಗಿ ಆತ್ಮನಿರ್ಭರ ಭಾರತದ ಕಲ್ಪನೆ ಹೆಚ್ಚಾಗಿದೆ. ಈ ಮೂಲಕ ಗ್ರಾಮದ ಪ್ರತೀ ವ್ಯಕ್ತಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕು ಎನ್ನುವುದು ಉದ್ದೇಶ.
ಈ ಕಾರಣದಿಂದ ಸುಳ್ಯ ತಾಲೂಕು ಸೇರಿದಂತೆ ವಿವಿದೆಡೆ ತರಬೇತಿ ಶಿಬಿರಗಳು ನಡೆಯುತ್ತಿದೆ. ಗ್ರಾಮ ವಿಕಾಸ ತಂಡ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಯುವಕರಿಗೆ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಈ ಬಗ್ಗೆ ಯುವಕರು ಹೀಗೆ ಹೇಳುತ್ತಾರೆ…
ಶಿಬಿರದಲ್ಲಿ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಹಾಕಲು ಯುವಕರನ್ನು ತರಬೇತು ಮಾಡಲಾಗುತ್ತದೆ. ವಿವಿಧ ವಿಷಯಗಳ ಕುರಿತು ಯುವಕರಿಗೆ ತರಬೇತಿ ನೀಡಲಾಗುತ್ತದೆ. ಕೃಷಿ ಸೇರಿದಂತೆ ವಿವಿಧ ತರಬೇತಿ ಕಾರ್ಯಕ್ರಮ ವಾರಗಳ ಕಾಲ ನಡೆಯುತ್ತದೆ. ಈ ಬಗ್ಗೆ ಯುವಕರು ಹೇಳುವುದು ಹೀಗೆ….
ಕೃಷಿ ವಿಷಯದಲ್ಲಿ ಕಸಿ ಹಾಗೂ ಅಣಬೆ ಕೃಷಿ ಕಡೆಗೆ ಆದ್ಯತೆ ಇದೆ. ಕೃಷಿಯಲ್ಲಿ ಆದಾಯ ಹೆಚ್ಚಿ ಮಾಡಲು, ಸ್ವಾವಲಂಬೆಗೆ, ಅವಲಂಬನೆ ಕಡಿಮೆ ಮಾಡಲು ಈ ತಂತ್ರಗಳು ಇಲ್ಲಿ ಅಗತ್ಯ. ಇದೇ ದಿಸೆಯಲ್ಲಿ ಕಸಿ ಕಟ್ಟುವುದು , ಅದರ ಮಾದರಿಗಳು, ಕಸಿ ಕಟ್ಟಿದ್ದರ ಪ್ರಯೋಜನ, ಹೈನುಗಾರಿಕೆ ಸೇರಿದಂತೆ ಇತರ ವಿಭಾಗದಲ್ಲಿ ಇಡೀ ದಿನ ಪ್ರಾಯೋಗಿಕ ಹಾಗೂ ತಾಂತ್ರಿಕ ಮಾಹಿತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ನಗರದಲ್ಲಿ ಐಟಿ ಉದ್ಯೋಗದಲ್ಲಿದ್ದು ಕೃಷಿಗೆ ಮರಳುತ್ತಿರುವ ಯುವಕರೂ ಇದ್ದರೂ ಅವರ ಮಾತು ಹೀಗಿದೆ…
ಒಟ್ಟಿನಲ್ಲಿ ಕೃಷಿ ಕಡೆಗೆ ಯುವಕರು ಹೆಜ್ಜೆ ಹಾಕುತ್ತಿದ್ದಾರೆ. ದೈರ್ಯವಾಗಿ ಕೃಷಿ ಕಡೆಗೆ ಇಳಿಯುರಿ, ಸಂಪೂರ್ಣವಾಗಿ ತೊಡಗಿಸಿಕೊಂಡರೆ ಯಶಸ್ಸು ಖಂಡಿತಾ ಎಂಬುದೂ ಮನವರಿಕೆಯಾಗಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…