ಕೊರೋನೋತ್ತರದಲ್ಲಿ ಭಾರತದ ಹಳ್ಳಿಗಳ ಸ್ಥಿತಿ ಬದಲಾಗಬೇಕಲೇಬೇಕಾದ ಅನಿವಾರ್ಯವಿದೆ. ಹೀಗಾಗಿ ಪ್ರತೀ ಹಳ್ಳಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕಿದೆ. ಇದಕ್ಕಾಗಿ ಆತ್ಮನಿರ್ಭರ ಭಾರತದ ಕಲ್ಪನೆ ಹೆಚ್ಚಾಗಿದೆ. ಈ ಮೂಲಕ ಗ್ರಾಮದ ಪ್ರತೀ ವ್ಯಕ್ತಿಯೂ ಸ್ವಾವಲಂಬನೆಯ ಹಾದಿಯಲ್ಲಿ ನಡೆಯಬೇಕು ಎನ್ನುವುದು ಉದ್ದೇಶ.
ಈ ಕಾರಣದಿಂದ ಸುಳ್ಯ ತಾಲೂಕು ಸೇರಿದಂತೆ ವಿವಿದೆಡೆ ತರಬೇತಿ ಶಿಬಿರಗಳು ನಡೆಯುತ್ತಿದೆ. ಗ್ರಾಮ ವಿಕಾಸ ತಂಡ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಯುವಕರಿಗೆ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಈ ಬಗ್ಗೆ ಯುವಕರು ಹೀಗೆ ಹೇಳುತ್ತಾರೆ…
ಶಿಬಿರದಲ್ಲಿ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಹಾಕಲು ಯುವಕರನ್ನು ತರಬೇತು ಮಾಡಲಾಗುತ್ತದೆ. ವಿವಿಧ ವಿಷಯಗಳ ಕುರಿತು ಯುವಕರಿಗೆ ತರಬೇತಿ ನೀಡಲಾಗುತ್ತದೆ. ಕೃಷಿ ಸೇರಿದಂತೆ ವಿವಿಧ ತರಬೇತಿ ಕಾರ್ಯಕ್ರಮ ವಾರಗಳ ಕಾಲ ನಡೆಯುತ್ತದೆ. ಈ ಬಗ್ಗೆ ಯುವಕರು ಹೇಳುವುದು ಹೀಗೆ….
ಕೃಷಿ ವಿಷಯದಲ್ಲಿ ಕಸಿ ಹಾಗೂ ಅಣಬೆ ಕೃಷಿ ಕಡೆಗೆ ಆದ್ಯತೆ ಇದೆ. ಕೃಷಿಯಲ್ಲಿ ಆದಾಯ ಹೆಚ್ಚಿ ಮಾಡಲು, ಸ್ವಾವಲಂಬೆಗೆ, ಅವಲಂಬನೆ ಕಡಿಮೆ ಮಾಡಲು ಈ ತಂತ್ರಗಳು ಇಲ್ಲಿ ಅಗತ್ಯ. ಇದೇ ದಿಸೆಯಲ್ಲಿ ಕಸಿ ಕಟ್ಟುವುದು , ಅದರ ಮಾದರಿಗಳು, ಕಸಿ ಕಟ್ಟಿದ್ದರ ಪ್ರಯೋಜನ, ಹೈನುಗಾರಿಕೆ ಸೇರಿದಂತೆ ಇತರ ವಿಭಾಗದಲ್ಲಿ ಇಡೀ ದಿನ ಪ್ರಾಯೋಗಿಕ ಹಾಗೂ ತಾಂತ್ರಿಕ ಮಾಹಿತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ನಗರದಲ್ಲಿ ಐಟಿ ಉದ್ಯೋಗದಲ್ಲಿದ್ದು ಕೃಷಿಗೆ ಮರಳುತ್ತಿರುವ ಯುವಕರೂ ಇದ್ದರೂ ಅವರ ಮಾತು ಹೀಗಿದೆ…
ಒಟ್ಟಿನಲ್ಲಿ ಕೃಷಿ ಕಡೆಗೆ ಯುವಕರು ಹೆಜ್ಜೆ ಹಾಕುತ್ತಿದ್ದಾರೆ. ದೈರ್ಯವಾಗಿ ಕೃಷಿ ಕಡೆಗೆ ಇಳಿಯುರಿ, ಸಂಪೂರ್ಣವಾಗಿ ತೊಡಗಿಸಿಕೊಂಡರೆ ಯಶಸ್ಸು ಖಂಡಿತಾ ಎಂಬುದೂ ಮನವರಿಕೆಯಾಗಿದೆ.
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…