ಕೃಷಿಗೆ ಕಾಡಾನೆ ಹಾವಳಿ ಹೆಚ್ಚಾಗಿದೆ. ಸುಳ್ಯದ ಬಳಿಯ ಪರಿವಾರ ಎಂಬಲ್ಲಿನ ಕೃಷಿಕ ವಿಶ್ವನಾಥ ರೈ ಎಂಬವರ ತೋಟಕ್ಕೆ ಆನೆ ದಾಳಿ ನಡೆಸಿ ಅಡಿಕೆ, ತೆಂಗು, ಬಾಳೆ ಸಹಿತ ಕೃಷಿ ಹಾನಿ ಮಾಡಿದೆ.
ಕಳೆದ ಕೆಲವು ವರ್ಷಗಳಿಂದ ಸುಳ್ಯ ತಾಲೂಕಿನ ಅರಣ್ಯದ ಅಂಚಿನ ತೋಟಗಳಿಗೆ ಕಾಡಾನೆ ಹಾವಳಿ ಇದೆ. ಈಚೆಗಷ್ಟೇ ಕೊಲ್ಲಮೊಗ್ರ ಬಳಿಯ ಇಡ್ನೂರು ಎಂಬಲ್ಲಿ ಬೆಳಗ್ಗೆ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಆಲೆಟ್ಟಿ, ಮಂಡೆಕೋಲು, ಸಂಪಾಜೆ , ಕೊಲ್ಲಮೊಗ್ರ, ಮಡಪ್ಪಾಡಿ ಸೇರಿದಂತೆ ವಿವಿದೆಡೆ ಕಾಡಾನೆ ಹಾವಳಿ ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಸುಳ್ಯ ತಾಲೂಕಿನಲ್ಲಿ ಮಾತ್ರವಲ್ಲ ಉತ್ತರಕನ್ನಡ, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲೂ ಕಾಡಾನೆ ಹಾವಳಿ ಇದೆ. ಈಚೆಗೆ ರಿಪ್ಪನ್ ಪೇಟೆಯ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಿವಿದೆಡೆ ಕಾಡಾನೆ ಹಾವಳಿ ನಡೆಸಿದೆ. ಅಡಿಕೆ, ಗದ್ದೆ ಸೇರಿದಂತೆ ವಿವಿಧ ಕೃಷಿಯ ಮೇಲೆ ಹಾನಿ ನಡೆಸಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…