ಕೃಷಿಗೆ ಕಾಡಾನೆ ಹಾವಳಿ ಹೆಚ್ಚಾಗಿದೆ. ಸುಳ್ಯದ ಬಳಿಯ ಪರಿವಾರ ಎಂಬಲ್ಲಿನ ಕೃಷಿಕ ವಿಶ್ವನಾಥ ರೈ ಎಂಬವರ ತೋಟಕ್ಕೆ ಆನೆ ದಾಳಿ ನಡೆಸಿ ಅಡಿಕೆ, ತೆಂಗು, ಬಾಳೆ ಸಹಿತ ಕೃಷಿ ಹಾನಿ ಮಾಡಿದೆ.
ಕಳೆದ ಕೆಲವು ವರ್ಷಗಳಿಂದ ಸುಳ್ಯ ತಾಲೂಕಿನ ಅರಣ್ಯದ ಅಂಚಿನ ತೋಟಗಳಿಗೆ ಕಾಡಾನೆ ಹಾವಳಿ ಇದೆ. ಈಚೆಗಷ್ಟೇ ಕೊಲ್ಲಮೊಗ್ರ ಬಳಿಯ ಇಡ್ನೂರು ಎಂಬಲ್ಲಿ ಬೆಳಗ್ಗೆ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಆಲೆಟ್ಟಿ, ಮಂಡೆಕೋಲು, ಸಂಪಾಜೆ , ಕೊಲ್ಲಮೊಗ್ರ, ಮಡಪ್ಪಾಡಿ ಸೇರಿದಂತೆ ವಿವಿದೆಡೆ ಕಾಡಾನೆ ಹಾವಳಿ ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಸುಳ್ಯ ತಾಲೂಕಿನಲ್ಲಿ ಮಾತ್ರವಲ್ಲ ಉತ್ತರಕನ್ನಡ, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲೂ ಕಾಡಾನೆ ಹಾವಳಿ ಇದೆ. ಈಚೆಗೆ ರಿಪ್ಪನ್ ಪೇಟೆಯ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಿವಿದೆಡೆ ಕಾಡಾನೆ ಹಾವಳಿ ನಡೆಸಿದೆ. ಅಡಿಕೆ, ಗದ್ದೆ ಸೇರಿದಂತೆ ವಿವಿಧ ಕೃಷಿಯ ಮೇಲೆ ಹಾನಿ ನಡೆಸಿದೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…