ಚುನಾವಣೆಯ ಭದ್ರತೆ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನ | ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆಗೆ ತಡೆ |

April 17, 2024
10:47 AM
ಭಾರತ-ಬಾಂಗ್ಲಾದೇಶ  ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್‌ಎಫ್‌  ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ.

ಚುನಾವಣೆಯ ಗಡಿ ಭದ್ರತೆಯ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನಕ್ಕೆ ತಡೆಯಾಗಿದೆ.  ಭಾರತ-ಬಾಂಗ್ಲಾದೇಶ  ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್‌ಎಫ್‌  ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ. ಅಂತರಾಷ್ಟ್ರೀಯ ಗಡಿಯಲ್ಲಿ ಸುಮಾರು 4,900 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.

Advertisement
Advertisement

ಖಚಿತ ಮಾಹಿತಿಯ ಮೇರೆಗೆ,ಬಿಎಸ್‌ಎಫ್‌ ಹಾಗೂ ಮೇಘಾಲಯ ಪೊಲೀಸರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಗಡಿಯ ಸಮೀಪದಲ್ಲಿರುವ  ಮನೆಯಿಂದ  ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆಯಾಗಿ ಭಾರತದ ಗಡಿಭಾಗದಲ್ಲಿ ಮನೆಗಳಲ್ಲಿ ದಾಸ್ತಾನು ಮಾಡಿ ಅಲ್ಲಿಂದ ಭಾರತಕ್ಕೆ ರವಾನೆ ಮಾಡಲಾಗುತ್ತಿರುವುದರ ಬಗ್ಗೆ ಗಡಿ ಭದ್ರತಾ ಸಿಬಂದಿಗಳ ಕಣ್ಗಾವಲು ಇರಿಸಿದ್ದಾರೆ. ಚುನಾವಣೆ ಸಮಯದಲ್ಲೂ ಅಕ್ರಮ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ಇದೀಗ ಇಂತಹ ಅಕ್ರಮಗಳ ವಿರುದ್ಧ ತಡೆಗೆ ಪೊಲೀಸರು ಹಾಗೂ ಗಡಿಭದ್ರತಾ ತಂಡವು ಕೆಲಸ ಮಾಡಿದೆ.

ಇದೇ ವೇಳೆ ಅಸ್ಸಾಂ ರಾಜ್ಯದ ಕಾಮ್‌ಜಾಂಗ್ ಜಿಲ್ಲೆಯ ಸಾಮಾನ್ಯ ಪ್ರದೇಶದಲ್ಲಿ ಕಾಂಗ್‌ಪತ್ ಸೆಂಟರ್‌ನಲ್ಲಿ ಅಸ್ಸಾಂ ರೈಫಲ್ಸ್‌ನ  ಪಡೆಗಳು ಅಗತ್ಯ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.  ಸುಮಾರು 186 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Source: News Post

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?
May 21, 2025
12:46 PM
by: ಸಾಯಿಶೇಖರ್ ಕರಿಕಳ
2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್
May 21, 2025
11:18 AM
by: The Rural Mirror ಸುದ್ದಿಜಾಲ
ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ
May 21, 2025
11:11 AM
by: The Rural Mirror ಸುದ್ದಿಜಾಲ
ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ
May 21, 2025
11:07 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group