ಚುನಾವಣೆಯ ಗಡಿ ಭದ್ರತೆಯ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನಕ್ಕೆ ತಡೆಯಾಗಿದೆ. ಭಾರತ-ಬಾಂಗ್ಲಾದೇಶ ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್ಎಫ್ ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ. ಅಂತರಾಷ್ಟ್ರೀಯ ಗಡಿಯಲ್ಲಿ ಸುಮಾರು 4,900 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ,ಬಿಎಸ್ಎಫ್ ಹಾಗೂ ಮೇಘಾಲಯ ಪೊಲೀಸರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಗಡಿಯ ಸಮೀಪದಲ್ಲಿರುವ ಮನೆಯಿಂದ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆಯಾಗಿ ಭಾರತದ ಗಡಿಭಾಗದಲ್ಲಿ ಮನೆಗಳಲ್ಲಿ ದಾಸ್ತಾನು ಮಾಡಿ ಅಲ್ಲಿಂದ ಭಾರತಕ್ಕೆ ರವಾನೆ ಮಾಡಲಾಗುತ್ತಿರುವುದರ ಬಗ್ಗೆ ಗಡಿ ಭದ್ರತಾ ಸಿಬಂದಿಗಳ ಕಣ್ಗಾವಲು ಇರಿಸಿದ್ದಾರೆ. ಚುನಾವಣೆ ಸಮಯದಲ್ಲೂ ಅಕ್ರಮ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ಇದೀಗ ಇಂತಹ ಅಕ್ರಮಗಳ ವಿರುದ್ಧ ತಡೆಗೆ ಪೊಲೀಸರು ಹಾಗೂ ಗಡಿಭದ್ರತಾ ತಂಡವು ಕೆಲಸ ಮಾಡಿದೆ.
ಇದೇ ವೇಳೆ ಅಸ್ಸಾಂ ರಾಜ್ಯದ ಕಾಮ್ಜಾಂಗ್ ಜಿಲ್ಲೆಯ ಸಾಮಾನ್ಯ ಪ್ರದೇಶದಲ್ಲಿ ಕಾಂಗ್ಪತ್ ಸೆಂಟರ್ನಲ್ಲಿ ಅಸ್ಸಾಂ ರೈಫಲ್ಸ್ನ ಪಡೆಗಳು ಅಗತ್ಯ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ. ಸುಮಾರು 186 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.
Source: News Post
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…
ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490