MIRROR FOCUS

ಚುನಾವಣೆಯ ಭದ್ರತೆ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನ | ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆಗೆ ತಡೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚುನಾವಣೆಯ ಗಡಿ ಭದ್ರತೆಯ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನಕ್ಕೆ ತಡೆಯಾಗಿದೆ.  ಭಾರತ-ಬಾಂಗ್ಲಾದೇಶ  ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್‌ಎಫ್‌  ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ. ಅಂತರಾಷ್ಟ್ರೀಯ ಗಡಿಯಲ್ಲಿ ಸುಮಾರು 4,900 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.

Advertisement
Advertisement

ಖಚಿತ ಮಾಹಿತಿಯ ಮೇರೆಗೆ,ಬಿಎಸ್‌ಎಫ್‌ ಹಾಗೂ ಮೇಘಾಲಯ ಪೊಲೀಸರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಗಡಿಯ ಸಮೀಪದಲ್ಲಿರುವ  ಮನೆಯಿಂದ  ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆಯಾಗಿ ಭಾರತದ ಗಡಿಭಾಗದಲ್ಲಿ ಮನೆಗಳಲ್ಲಿ ದಾಸ್ತಾನು ಮಾಡಿ ಅಲ್ಲಿಂದ ಭಾರತಕ್ಕೆ ರವಾನೆ ಮಾಡಲಾಗುತ್ತಿರುವುದರ ಬಗ್ಗೆ ಗಡಿ ಭದ್ರತಾ ಸಿಬಂದಿಗಳ ಕಣ್ಗಾವಲು ಇರಿಸಿದ್ದಾರೆ. ಚುನಾವಣೆ ಸಮಯದಲ್ಲೂ ಅಕ್ರಮ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ಇದೀಗ ಇಂತಹ ಅಕ್ರಮಗಳ ವಿರುದ್ಧ ತಡೆಗೆ ಪೊಲೀಸರು ಹಾಗೂ ಗಡಿಭದ್ರತಾ ತಂಡವು ಕೆಲಸ ಮಾಡಿದೆ.

ಇದೇ ವೇಳೆ ಅಸ್ಸಾಂ ರಾಜ್ಯದ ಕಾಮ್‌ಜಾಂಗ್ ಜಿಲ್ಲೆಯ ಸಾಮಾನ್ಯ ಪ್ರದೇಶದಲ್ಲಿ ಕಾಂಗ್‌ಪತ್ ಸೆಂಟರ್‌ನಲ್ಲಿ ಅಸ್ಸಾಂ ರೈಫಲ್ಸ್‌ನ  ಪಡೆಗಳು ಅಗತ್ಯ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.  ಸುಮಾರು 186 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Source: News Post

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ.  ಜೊತೆಗೆ…

11 hours ago

ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…

17 hours ago

ಬದುಕು ಪುರಾಣ | ವಿಶ್ವದ ಮೊದಲ ಪತ್ರಕರ್ತ!

ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…

18 hours ago

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…

1 day ago