ಚುನಾವಣೆಯ ಗಡಿ ಭದ್ರತೆಯ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನಕ್ಕೆ ತಡೆಯಾಗಿದೆ. ಭಾರತ-ಬಾಂಗ್ಲಾದೇಶ ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್ಎಫ್ ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ. ಅಂತರಾಷ್ಟ್ರೀಯ ಗಡಿಯಲ್ಲಿ ಸುಮಾರು 4,900 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ,ಬಿಎಸ್ಎಫ್ ಹಾಗೂ ಮೇಘಾಲಯ ಪೊಲೀಸರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಗಡಿಯ ಸಮೀಪದಲ್ಲಿರುವ ಮನೆಯಿಂದ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆಯಾಗಿ ಭಾರತದ ಗಡಿಭಾಗದಲ್ಲಿ ಮನೆಗಳಲ್ಲಿ ದಾಸ್ತಾನು ಮಾಡಿ ಅಲ್ಲಿಂದ ಭಾರತಕ್ಕೆ ರವಾನೆ ಮಾಡಲಾಗುತ್ತಿರುವುದರ ಬಗ್ಗೆ ಗಡಿ ಭದ್ರತಾ ಸಿಬಂದಿಗಳ ಕಣ್ಗಾವಲು ಇರಿಸಿದ್ದಾರೆ. ಚುನಾವಣೆ ಸಮಯದಲ್ಲೂ ಅಕ್ರಮ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ಇದೀಗ ಇಂತಹ ಅಕ್ರಮಗಳ ವಿರುದ್ಧ ತಡೆಗೆ ಪೊಲೀಸರು ಹಾಗೂ ಗಡಿಭದ್ರತಾ ತಂಡವು ಕೆಲಸ ಮಾಡಿದೆ.
ಇದೇ ವೇಳೆ ಅಸ್ಸಾಂ ರಾಜ್ಯದ ಕಾಮ್ಜಾಂಗ್ ಜಿಲ್ಲೆಯ ಸಾಮಾನ್ಯ ಪ್ರದೇಶದಲ್ಲಿ ಕಾಂಗ್ಪತ್ ಸೆಂಟರ್ನಲ್ಲಿ ಅಸ್ಸಾಂ ರೈಫಲ್ಸ್ನ ಪಡೆಗಳು ಅಗತ್ಯ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ. ಸುಮಾರು 186 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.
Source: News Post
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…