ಚುನಾವಣೆಯ ಗಡಿ ಭದ್ರತೆಯ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನಕ್ಕೆ ತಡೆಯಾಗಿದೆ. ಭಾರತ-ಬಾಂಗ್ಲಾದೇಶ ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್ಎಫ್ ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ. ಅಂತರಾಷ್ಟ್ರೀಯ ಗಡಿಯಲ್ಲಿ ಸುಮಾರು 4,900 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ,ಬಿಎಸ್ಎಫ್ ಹಾಗೂ ಮೇಘಾಲಯ ಪೊಲೀಸರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಗಡಿಯ ಸಮೀಪದಲ್ಲಿರುವ ಮನೆಯಿಂದ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆಯಾಗಿ ಭಾರತದ ಗಡಿಭಾಗದಲ್ಲಿ ಮನೆಗಳಲ್ಲಿ ದಾಸ್ತಾನು ಮಾಡಿ ಅಲ್ಲಿಂದ ಭಾರತಕ್ಕೆ ರವಾನೆ ಮಾಡಲಾಗುತ್ತಿರುವುದರ ಬಗ್ಗೆ ಗಡಿ ಭದ್ರತಾ ಸಿಬಂದಿಗಳ ಕಣ್ಗಾವಲು ಇರಿಸಿದ್ದಾರೆ. ಚುನಾವಣೆ ಸಮಯದಲ್ಲೂ ಅಕ್ರಮ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ಇದೀಗ ಇಂತಹ ಅಕ್ರಮಗಳ ವಿರುದ್ಧ ತಡೆಗೆ ಪೊಲೀಸರು ಹಾಗೂ ಗಡಿಭದ್ರತಾ ತಂಡವು ಕೆಲಸ ಮಾಡಿದೆ.
ಇದೇ ವೇಳೆ ಅಸ್ಸಾಂ ರಾಜ್ಯದ ಕಾಮ್ಜಾಂಗ್ ಜಿಲ್ಲೆಯ ಸಾಮಾನ್ಯ ಪ್ರದೇಶದಲ್ಲಿ ಕಾಂಗ್ಪತ್ ಸೆಂಟರ್ನಲ್ಲಿ ಅಸ್ಸಾಂ ರೈಫಲ್ಸ್ನ ಪಡೆಗಳು ಅಗತ್ಯ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ. ಸುಮಾರು 186 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.
Source: News Post
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…