ಚುನಾವಣೆಯ ಗಡಿ ಭದ್ರತೆಯ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನಕ್ಕೆ ತಡೆಯಾಗಿದೆ. ಭಾರತ-ಬಾಂಗ್ಲಾದೇಶ ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್ಎಫ್ ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ. ಅಂತರಾಷ್ಟ್ರೀಯ ಗಡಿಯಲ್ಲಿ ಸುಮಾರು 4,900 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ,ಬಿಎಸ್ಎಫ್ ಹಾಗೂ ಮೇಘಾಲಯ ಪೊಲೀಸರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಗಡಿಯ ಸಮೀಪದಲ್ಲಿರುವ ಮನೆಯಿಂದ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆಯಾಗಿ ಭಾರತದ ಗಡಿಭಾಗದಲ್ಲಿ ಮನೆಗಳಲ್ಲಿ ದಾಸ್ತಾನು ಮಾಡಿ ಅಲ್ಲಿಂದ ಭಾರತಕ್ಕೆ ರವಾನೆ ಮಾಡಲಾಗುತ್ತಿರುವುದರ ಬಗ್ಗೆ ಗಡಿ ಭದ್ರತಾ ಸಿಬಂದಿಗಳ ಕಣ್ಗಾವಲು ಇರಿಸಿದ್ದಾರೆ. ಚುನಾವಣೆ ಸಮಯದಲ್ಲೂ ಅಕ್ರಮ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ಇದೀಗ ಇಂತಹ ಅಕ್ರಮಗಳ ವಿರುದ್ಧ ತಡೆಗೆ ಪೊಲೀಸರು ಹಾಗೂ ಗಡಿಭದ್ರತಾ ತಂಡವು ಕೆಲಸ ಮಾಡಿದೆ.
ಇದೇ ವೇಳೆ ಅಸ್ಸಾಂ ರಾಜ್ಯದ ಕಾಮ್ಜಾಂಗ್ ಜಿಲ್ಲೆಯ ಸಾಮಾನ್ಯ ಪ್ರದೇಶದಲ್ಲಿ ಕಾಂಗ್ಪತ್ ಸೆಂಟರ್ನಲ್ಲಿ ಅಸ್ಸಾಂ ರೈಫಲ್ಸ್ನ ಪಡೆಗಳು ಅಗತ್ಯ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ. ಸುಮಾರು 186 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.
Source: News Post
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…