ಚುನಾವಣೆಯ ಗಡಿ ಭದ್ರತೆಯ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನಕ್ಕೆ ತಡೆಯಾಗಿದೆ. ಭಾರತ-ಬಾಂಗ್ಲಾದೇಶ ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್ಎಫ್ ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ. ಅಂತರಾಷ್ಟ್ರೀಯ ಗಡಿಯಲ್ಲಿ ಸುಮಾರು 4,900 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ,ಬಿಎಸ್ಎಫ್ ಹಾಗೂ ಮೇಘಾಲಯ ಪೊಲೀಸರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಗಡಿಯ ಸಮೀಪದಲ್ಲಿರುವ ಮನೆಯಿಂದ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆಯಾಗಿ ಭಾರತದ ಗಡಿಭಾಗದಲ್ಲಿ ಮನೆಗಳಲ್ಲಿ ದಾಸ್ತಾನು ಮಾಡಿ ಅಲ್ಲಿಂದ ಭಾರತಕ್ಕೆ ರವಾನೆ ಮಾಡಲಾಗುತ್ತಿರುವುದರ ಬಗ್ಗೆ ಗಡಿ ಭದ್ರತಾ ಸಿಬಂದಿಗಳ ಕಣ್ಗಾವಲು ಇರಿಸಿದ್ದಾರೆ. ಚುನಾವಣೆ ಸಮಯದಲ್ಲೂ ಅಕ್ರಮ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ಇದೀಗ ಇಂತಹ ಅಕ್ರಮಗಳ ವಿರುದ್ಧ ತಡೆಗೆ ಪೊಲೀಸರು ಹಾಗೂ ಗಡಿಭದ್ರತಾ ತಂಡವು ಕೆಲಸ ಮಾಡಿದೆ.
ಇದೇ ವೇಳೆ ಅಸ್ಸಾಂ ರಾಜ್ಯದ ಕಾಮ್ಜಾಂಗ್ ಜಿಲ್ಲೆಯ ಸಾಮಾನ್ಯ ಪ್ರದೇಶದಲ್ಲಿ ಕಾಂಗ್ಪತ್ ಸೆಂಟರ್ನಲ್ಲಿ ಅಸ್ಸಾಂ ರೈಫಲ್ಸ್ನ ಪಡೆಗಳು ಅಗತ್ಯ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ. ಸುಮಾರು 186 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.
Source: News Post
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…