Opinion

#Inamdar | ರಾಜಕೀಯದಿಂದ ಸಿನಿಮಾದವರೆಗೂ ಔರಂಗಜೇಬನ ವಿಚಾರ | ಶಿವಾಜಿ ಕನ್ನಡಿಗ ಎಂಬ ವಿವಾದ ಹುಟ್ಟು ಹಾಕಿದ ಇನಾಮ್ದಾರ್ ಚಿತ್ರ ತಂಡ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದು ಮೂರ್ನಾಲ್ಕು ದಿನದಿಂದ ಔರಂಗಜೇಬ್ ವಿಚಾರ ರಾಜಕೀಯ ಪಡಸಾಲೆಯಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಚರ್ಚೆಯಾಗುತ್ತಿತ್ತು.ಈಗ ಈ ಕಲಹ ರಾಜಕೀಯದಿಂದ ಸಿನೆಮಾ ರಂಗಕ್ಕೂ ಕಾಲಿಟ್ಟಿದೆ.ನಿನ್ನೆ ಶಿವಾಜಿ ವಂಶಜರ ಕಥಾ ಹಂದರವುಳ್ಳ ಇನಾಮ್ದಾರ ಸಿನೆಮಾದ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ಔರಂಗಜೇಬ್ ವರ್ಸಸ್ ಶಿವಾಜಿ ವಿಚಾರ ಮುನ್ನೆಲೆಗೆ ಬಂತು.

Advertisement

ಸಿನೆಮಾದ ಕುರಿತು ಮಾತನಾಡುತ್ತ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜಕುಮಾರ ಖ್ಯಾತಿಯ ಹಿರಿಯ ನಟ ಎಮ್.ಕೆ ಮಠ ಔರಂಗಜೇಬ ಯಾವನ್ರಿ ಅವನೊಬ್ಬ ಮತಾಂಧ ಅಂತ ಹರಿಹಾಯ್ದಿದ್ದಾರೆ. ಇವನಿಂದ ದೇಶಕ್ಕೆ ಯಾವ ಅನುಕೂಲನೂ ಆಗಿಲ್ಲ. ಹಿಂದೂ, ಮುಸ್ಲಿಂ, ಕ್ರೈಸ್ತರನ್ನೂ ನೋಡದೆ ಜನರನ್ನು ಕೊಂದವನು ಅವನು. ನಮ್ಮ ದೇಶದ ಎಷ್ಟು ಧಾರ್ಮಿಕ ಕೇಂದ್ರಗಳನ್ನು ನಾಶ ಮಾಡಿದ್ದಾನೆ. ಅವನು ನಮ್ಮ ದೇಶದ ಮಹಾರಾಜ ಅಂತ ಸೋಶಿಯಲ್ ಮಿಡಿಯಾಗಳಲ್ಲಿ ಹೊಗಿ ಅಟ್ಟಕ್ಕೇರಿಸ್ತಿದ್ದಾರೆ. ಅಷ್ಟೆಲ್ಲಾ ಹೊಗಳುವಷ್ಟು ದೊಡ್ಡ ಜನ ಅವನಲ್ಲಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತದನಂತರ ಖ್ಯಾತ ನಟರಾದ ಪ್ರಮೋದ್ ಶೆಟ್ಟಿ ಮಾತನಾಡಿ ಸಮಾನತೆ ಬೇಕು ಆದ್ರೆ ಇವತ್ತು ಯಾವ ತರಹದ ಸಮಾನತೆ ಇದೆ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಅನ್ನೋ ರೀತಿ ಜನರ ನಿಲುವುಗಳಿಗೆ ಚಾಟಿ ಬೀಸಿದ್ರು. ಜನ ಆರಿಸೋ ಸರ್ಕಾರದ ಮೇಲೆ ಸಮಾಜವನ್ನು ಕಾಪಾಡುವ ಹೆಚ್ಚಿನ ಜವಾಬ್ದಾರಿ ಇದೆ. ನಾವು ಕಲಾವಿದರು, ಜನರನ್ನು ಮನರಂಜಿಸಲು ಬರ್ತೇವೆ. ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೊಡಲು ನಮ್ಮಿಂದ ಸಾಧ್ಯವಿಲ್ಲ. ಬೆಂಬಲಕ್ಕಷ್ಟೇ ನಿಲ್ಲಬಹುದು ಎಂದರು.

ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಮಾತನಾಡಿ ಔರಂಗಜೇಬನ ಬ್ಯಾನರ್ ಹಾಕೋಕೆ ಅಡ್ಡಿ ಇಲ್ಲ ಆದ್ರೆ ಮೊನ್ನೆ ಸಂಘಟನೆಯೊಂದು ಶಿವಾಜಿ ಕುರಿತು ಕಾರ್ಯಕ್ರಮ ಮಾಡಲು ಹೊರಟಾಗ ಪುತ್ಥಳಿ ಇಡಲು ಬಿಡ್ಲಿಲ್ಲ.ಇವೆಲ್ಲಾ ಯಾವ ರೀತಿಯ ಧೋರಣೆ ಎಂದು ಪ್ರಶ್ನೆ ಮಾಡುತ್ತಲೆ ಶಿವಾಜಿ ಕನ್ನಡಿಗ ಎಂದು ಹೇಳುವ ಮೂಲಕ ಹೊಸದೊಂದು ವಿವಾದ ಶುರು ಮಾಡಿದ್ದಾರೆ.

ಬರೀ ಮಾತಿನಲ್ಲಷ್ಟೆ ಇದೇ ತಿಂಗಳು 27ನೇ ತಾರೀಖು ಬಿಡುಗಡೆಗೊಳ್ಳಲಿರುವ ಇನಾಮ್ದಾರ್ ಸಿನೆಮಾ ಟ್ರೈಲರ್ ನಲ್ಲೂ ಕೂಡ ಶಿವಾಜಿಯನ್ನ ಕನ್ನಡದ ಕುಲ ತಿಲಕ ಅಂತ ಕರೆಯಲಾಗುತ್ತದೆ. ಶಿವಾಜಿ ಕನ್ನಡಿಗ ಎಂಬ ಮಾತನ್ನು ಹೇಳುವ ಮೂಲಕ ವಾದ-ವಿವಾದವನ್ನು ಹುಟ್ಟು ಹಾಕಿದೆ ಈ ಇನಾಮ್ದಾರ್ ಚಿತ್ರ.

ಈ ಹಿಂದೆಯೂ ಕೂಡ ಶಿವಾಜಿ ಕನ್ನಡಿಗ ಎಂದು ಹೇಳಿದ್ದ ರಾಜಕಾರಣಿಗಳ ವಿರುದ್ಧ ಕನ್ನಡಪರ ಸಂಘಟನೆಗಳು ಗರಂ ಆಗಿದ್ವು. ಇದೀಗ ಮತ್ತೆ ಅದೇ ಹೇಳಿಕೆ ಸಿನೆಮಾದಲ್ಲಿ ಬಳಸಿರೋದ್ರಿಂದ ಪರ-ವಿರೋಧ ಚರ್ಚೆಗಳು ಈಗಾಗಲೆ ಶುರುವಾಗಿವೆ. ಇದಕ್ಕೆಲ್ಲ ಚಿತ್ರ ತಂಡ ಯಾವ ಸಮಜಾಯಿಷಿ ಕೊಡುತ್ತೆ ಕಾದು ನೋಡಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

3 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

3 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

6 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

6 hours ago

ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ, …

6 hours ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…

6 hours ago