Advertisement
Opinion

#Inamdar | ರಾಜಕೀಯದಿಂದ ಸಿನಿಮಾದವರೆಗೂ ಔರಂಗಜೇಬನ ವಿಚಾರ | ಶಿವಾಜಿ ಕನ್ನಡಿಗ ಎಂಬ ವಿವಾದ ಹುಟ್ಟು ಹಾಕಿದ ಇನಾಮ್ದಾರ್ ಚಿತ್ರ ತಂಡ |

Share

ಕಳೆದು ಮೂರ್ನಾಲ್ಕು ದಿನದಿಂದ ಔರಂಗಜೇಬ್ ವಿಚಾರ ರಾಜಕೀಯ ಪಡಸಾಲೆಯಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಚರ್ಚೆಯಾಗುತ್ತಿತ್ತು.ಈಗ ಈ ಕಲಹ ರಾಜಕೀಯದಿಂದ ಸಿನೆಮಾ ರಂಗಕ್ಕೂ ಕಾಲಿಟ್ಟಿದೆ.ನಿನ್ನೆ ಶಿವಾಜಿ ವಂಶಜರ ಕಥಾ ಹಂದರವುಳ್ಳ ಇನಾಮ್ದಾರ ಸಿನೆಮಾದ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ಔರಂಗಜೇಬ್ ವರ್ಸಸ್ ಶಿವಾಜಿ ವಿಚಾರ ಮುನ್ನೆಲೆಗೆ ಬಂತು.

ಸಿನೆಮಾದ ಕುರಿತು ಮಾತನಾಡುತ್ತ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜಕುಮಾರ ಖ್ಯಾತಿಯ ಹಿರಿಯ ನಟ ಎಮ್.ಕೆ ಮಠ ಔರಂಗಜೇಬ ಯಾವನ್ರಿ ಅವನೊಬ್ಬ ಮತಾಂಧ ಅಂತ ಹರಿಹಾಯ್ದಿದ್ದಾರೆ. ಇವನಿಂದ ದೇಶಕ್ಕೆ ಯಾವ ಅನುಕೂಲನೂ ಆಗಿಲ್ಲ. ಹಿಂದೂ, ಮುಸ್ಲಿಂ, ಕ್ರೈಸ್ತರನ್ನೂ ನೋಡದೆ ಜನರನ್ನು ಕೊಂದವನು ಅವನು. ನಮ್ಮ ದೇಶದ ಎಷ್ಟು ಧಾರ್ಮಿಕ ಕೇಂದ್ರಗಳನ್ನು ನಾಶ ಮಾಡಿದ್ದಾನೆ. ಅವನು ನಮ್ಮ ದೇಶದ ಮಹಾರಾಜ ಅಂತ ಸೋಶಿಯಲ್ ಮಿಡಿಯಾಗಳಲ್ಲಿ ಹೊಗಿ ಅಟ್ಟಕ್ಕೇರಿಸ್ತಿದ್ದಾರೆ. ಅಷ್ಟೆಲ್ಲಾ ಹೊಗಳುವಷ್ಟು ದೊಡ್ಡ ಜನ ಅವನಲ್ಲಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತದನಂತರ ಖ್ಯಾತ ನಟರಾದ ಪ್ರಮೋದ್ ಶೆಟ್ಟಿ ಮಾತನಾಡಿ ಸಮಾನತೆ ಬೇಕು ಆದ್ರೆ ಇವತ್ತು ಯಾವ ತರಹದ ಸಮಾನತೆ ಇದೆ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಅನ್ನೋ ರೀತಿ ಜನರ ನಿಲುವುಗಳಿಗೆ ಚಾಟಿ ಬೀಸಿದ್ರು. ಜನ ಆರಿಸೋ ಸರ್ಕಾರದ ಮೇಲೆ ಸಮಾಜವನ್ನು ಕಾಪಾಡುವ ಹೆಚ್ಚಿನ ಜವಾಬ್ದಾರಿ ಇದೆ. ನಾವು ಕಲಾವಿದರು, ಜನರನ್ನು ಮನರಂಜಿಸಲು ಬರ್ತೇವೆ. ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೊಡಲು ನಮ್ಮಿಂದ ಸಾಧ್ಯವಿಲ್ಲ. ಬೆಂಬಲಕ್ಕಷ್ಟೇ ನಿಲ್ಲಬಹುದು ಎಂದರು.

ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಮಾತನಾಡಿ ಔರಂಗಜೇಬನ ಬ್ಯಾನರ್ ಹಾಕೋಕೆ ಅಡ್ಡಿ ಇಲ್ಲ ಆದ್ರೆ ಮೊನ್ನೆ ಸಂಘಟನೆಯೊಂದು ಶಿವಾಜಿ ಕುರಿತು ಕಾರ್ಯಕ್ರಮ ಮಾಡಲು ಹೊರಟಾಗ ಪುತ್ಥಳಿ ಇಡಲು ಬಿಡ್ಲಿಲ್ಲ.ಇವೆಲ್ಲಾ ಯಾವ ರೀತಿಯ ಧೋರಣೆ ಎಂದು ಪ್ರಶ್ನೆ ಮಾಡುತ್ತಲೆ ಶಿವಾಜಿ ಕನ್ನಡಿಗ ಎಂದು ಹೇಳುವ ಮೂಲಕ ಹೊಸದೊಂದು ವಿವಾದ ಶುರು ಮಾಡಿದ್ದಾರೆ.

ಬರೀ ಮಾತಿನಲ್ಲಷ್ಟೆ ಇದೇ ತಿಂಗಳು 27ನೇ ತಾರೀಖು ಬಿಡುಗಡೆಗೊಳ್ಳಲಿರುವ ಇನಾಮ್ದಾರ್ ಸಿನೆಮಾ ಟ್ರೈಲರ್ ನಲ್ಲೂ ಕೂಡ ಶಿವಾಜಿಯನ್ನ ಕನ್ನಡದ ಕುಲ ತಿಲಕ ಅಂತ ಕರೆಯಲಾಗುತ್ತದೆ. ಶಿವಾಜಿ ಕನ್ನಡಿಗ ಎಂಬ ಮಾತನ್ನು ಹೇಳುವ ಮೂಲಕ ವಾದ-ವಿವಾದವನ್ನು ಹುಟ್ಟು ಹಾಕಿದೆ ಈ ಇನಾಮ್ದಾರ್ ಚಿತ್ರ.

ಈ ಹಿಂದೆಯೂ ಕೂಡ ಶಿವಾಜಿ ಕನ್ನಡಿಗ ಎಂದು ಹೇಳಿದ್ದ ರಾಜಕಾರಣಿಗಳ ವಿರುದ್ಧ ಕನ್ನಡಪರ ಸಂಘಟನೆಗಳು ಗರಂ ಆಗಿದ್ವು. ಇದೀಗ ಮತ್ತೆ ಅದೇ ಹೇಳಿಕೆ ಸಿನೆಮಾದಲ್ಲಿ ಬಳಸಿರೋದ್ರಿಂದ ಪರ-ವಿರೋಧ ಚರ್ಚೆಗಳು ಈಗಾಗಲೆ ಶುರುವಾಗಿವೆ. ಇದಕ್ಕೆಲ್ಲ ಚಿತ್ರ ತಂಡ ಯಾವ ಸಮಜಾಯಿಷಿ ಕೊಡುತ್ತೆ ಕಾದು ನೋಡಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

4 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

13 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

14 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

18 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

19 hours ago