Advertisement
MIRROR FOCUS

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಗ್ರಿಟೆಕ್ ಸಹಕಾರ ಭವಿಷ್ಯದ ಕೃಷಿ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ದಾರಿ ಮಾಡಿಕೊಡಬಹುದೆಂದು ಹೊಸ ವರದಿ ಹೇಳಿದೆ. “Australia-India AgTech Business Opportunities Report 2026” ವರದಿಯಲ್ಲಿ ಹವಾಮಾನ ಬದಲಾವಣೆ, ನೀರಿನ ಕೊರತೆ, ಉತ್ಪಾದನಾ ವೆಚ್ಚ ಏರಿಕೆ ಹಾಗೂ ಸರಬರಾಜು ಸರಪಳಿ ಸಮಸ್ಯೆಗಳಿಗೆ ತಂತ್ರಜ್ಞಾನ ಆಧಾರಿತ ಪರಿಹಾರಗಳ ಅಗತ್ಯವನ್ನು ಒತ್ತಿ ಹೇಳಲಾಗಿದೆ.

ವರದಿ ಪ್ರಕಾರ, ಭಾರತದಲ್ಲಿ ಈಗಾಗಲೇ 4,000ಕ್ಕೂ ಹೆಚ್ಚು ಅಗ್ರಿಟೆಕ್ ಸ್ಟಾರ್ಟ್‌ಅಪ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 150 ಮಿಲಿಯನ್ ರೈತರು ಈ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯಿಂದ ಪ್ರಯೋಜನ ಪಡೆಯುವ ಸಾಧ್ಯತೆ ಇದೆ. ಮತ್ತೊಂದೆಡೆ, ಆಸ್ಟ್ರೇಲಿಯಾದಲ್ಲಿ ಉನ್ನತ ಮಟ್ಟದ ಕೃಷಿ ಸಂಶೋಧನೆ, ನಿಯಂತ್ರಣ ವ್ಯವಸ್ಥೆ ಹಾಗೂ ನವೀನ ತಂತ್ರಜ್ಞಾನ ಅಭಿವೃದ್ಧಿಗೆ ಬಲವಾದ ಮೂಲಸೌಕರ್ಯವಿದೆ ಎಂದು ವರದಿ ವಿವರಿಸಿದೆ.

ಈ ಸಹಕಾರದ ಪ್ರಮುಖ ಕ್ಷೇತ್ರಗಳಲ್ಲಿ ಪ್ರಿಸಿಷನ್ ಕೃಷಿ (Precision Agriculture -ಅಂದರೆ ಕೃಷಿಯಲ್ಲಿ ತಂತ್ರಜ್ಞಾನವನ್ನು ಬಳಸಿ “ಅಗತ್ಯವಿರುವಷ್ಟು ಮಾತ್ರ” ನೀರು, ಗೊಬ್ಬರ, ಔಷಧಿ ಹಾಗೂ ಇತರೆ ಸಂಪನ್ಮೂಲಗಳನ್ನು ಸರಿಯಾದ ಜಾಗದಲ್ಲಿ, ಸರಿಯಾದ ಸಮಯದಲ್ಲಿ ಬಳಸುವ ವಿಧಾನ)  ಜೈವಿಕ ಕೃಷಿ ತಂತ್ರಜ್ಞಾನ, ಹವಾಮಾನ ಸ್ನೇಹಿ ಕೃಷಿ , ಡ್ರೋನ್‌, IoT ಸೆನ್ಸರ್‌, AI ಆಧಾರಿತ ಕೃಷಿ ನಿರ್ವಹಣೆ ಹಾಗೂ ಡಿಜಿಟಲ್ ಸರಬರಾಜು ಸರಪಳಿ ವ್ಯವಸ್ಥೆಗಳು ಸೇರಿವೆ.

ವರದಿ ಪ್ರಕಾರ, ಬೆಂಗಳೂರು, ಹೈದರಾಬಾದ್‌, ಪುಣೆ, ಮುಂಬೈ ಮತ್ತು ದೆಹಲಿ ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಭಾಗಿತ್ವದ ಪ್ರಮುಖ ಕೇಂದ್ರಗಳಾಗಿ ಹೊರಹೊಮ್ಮುತ್ತಿವೆ. ಸಂಯುಕ್ತ ಸಂಶೋಧನೆ, ಸ್ಟಾರ್ಟ್‌ಅಪ್‌ ಸಹಕಾರ, ಸ್ಥಳೀಯ ಉತ್ಪಾದನೆ ಮತ್ತು ತಂತ್ರಜ್ಞಾನ ವರ್ಗಾವಣೆಗಾಗಿ “Australia–India AgTech Innovation Fund” ಸ್ಥಾಪನೆಗೂ ಶಿಫಾರಸು ಮಾಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ಬದಲಾವಣೆಯಿಂದ ಉಂಟಾಗುತ್ತಿರುವ ಮಳೆ ಅಸ್ಥಿರತೆ, ನೀರಿನ ಕೊರತೆ ಮತ್ತು ಉತ್ಪಾದನಾ ವೆಚ್ಚ ಏರಿಕೆಯನ್ನು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನವೇ ಭವಿಷ್ಯದ ದಾರಿ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಡ್ರೋನ್‌, AI, ಸೆನ್ಸರ್‌ ಹಾಗೂ ಡೇಟಾ ಆಧಾರಿತ ಕೃಷಿ ನಿರ್ವಹಣೆಯಿಂದ ನೀರಿನ ಬಳಕೆ ಕಡಿಮೆ ಮಾಡಿ ಉತ್ಪಾದಕತೆ ಹೆಚ್ಚಿಸಲು ಸಾಧ್ಯ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

A new Australia–India AgTech report highlights major opportunities for collaboration in climate-smart farming, precision agriculture, AI, drones, and digital farm technologies. The report says India’s scale and Australia’s research strength can together drive sustainable and resilient agricultural growth.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago