Advertisement
ಸುದ್ದಿಗಳು

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

Share

ಜಾಗತಿಕ ರಾಜಕೀಯ ಬಿಕ್ಕಟ್ಟಿನ ಪರಿಣಾಮವಾಗಿ ಖಾಸಗಿ ವಲಯದ ಆಟೋ LPG ಪೂರೈಕೆ ಸರಪಳಿಯಲ್ಲಿ ಉಂಟಾದ ವ್ಯತ್ಯಯದಿಂದ ತೀವ್ರ ಬೇಡಿಕೆ ನಿರ್ಮಾಣವಾಗಿದೆ. ಈ ಹಿನ್ನೆಲೆ ಸಾರ್ವಜನಿಕ ವಲಯದ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ (ಇಂಡಿಯನ್ ಆಯಿಲ್) ಪೂರೈಕೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯ ದಿನಗಳಲ್ಲಿ ಸುಮಾರು 23 ಮೆಟ್ರಿಕ್ ಟನ್ ಆಟೋ LPG ಪೂರೈಕೆ ನಡೆಯುತ್ತಿತ್ತು. ಆದರೆ, ನಿನ್ನೆ ಸಂಸ್ಥೆ ದಾಖಲೆಯ 75.53 ಮೆಟ್ರಿಕ್ ಟನ್ ಅನಿಲವನ್ನು ಪೂರೈಸಿ, ಪೂರೈಕೆಯನ್ನು ಸುಮಾರು 300% ಹೆಚ್ಚಿಸಿದೆ.

ಇದೇ ರೀತಿ ಕರ್ನಾಟಕದಾದ್ಯಂತ ದೈನಂದಿನ ಪೂರೈಕೆಯನ್ನು 43.5 ಮೆಟ್ರಿಕ್ ಟನ್ನಿನಿಂದ 83 ಮೆಟ್ರಿಕ್ ಟನ್ ಗಿಂತಲೂ ಹೆಚ್ಚು ಮಾಡುವ ಮೂಲಕ ಪೂರೈಕೆಯನ್ನು ದ್ವಿಗುಣಗೊಳಿಸಲಾಗಿದೆ.

ರಾಜ್ಯದ ಮಾರುಕಟ್ಟೆಯಲ್ಲಿ ಶೇ. 80 ರಷ್ಟು ಪಾಲನ್ನು ಹೊಂದಿರುವ ಖಾಸಗಿ ವಿತರಣಾ ಕೇಂದ್ರಗಳಲ್ಲಿ ಪೂರೈಕೆ ವ್ಯತ್ಯಯ ಉಂಟಾದದ್ದು ಈ ತೀವ್ರ ಬೇಡಿಕೆಗೆ ಪ್ರಮುಖ ಕಾರಣವಾಗಿದೆ.

ಇಂಡಿಯನ್ ಆಯಿಲ್ ಸಂಸ್ಥೆ ಆಟೋ LPG ಗ್ರಾಹಕರಿಗೆ ಉಂಟಾದ ಅನಾನುಕೂಲತೆಗಳನ್ನು ಗಮನಿಸಿ, ಅವರ ಪರಿಸ್ಥಿತಿಗೆ ಸಹಾನುಭೂತಿ ವ್ಯಕ್ತಪಡಿಸಿದೆ. ಸಾರ್ವಜನಿಕ ವಲಯದ ಸಂಸ್ಥೆಯಾಗಿ ತನ್ನ ಜವಾಬ್ದಾರಿಯನ್ನು ಮನಗಂಡು, ಗರಿಷ್ಠ ಮಟ್ಟದಲ್ಲಿ LPG ಲಭ್ಯತೆ ಖಚಿತಪಡಿಸುವುದಾಗಿ ಸಂಸ್ಥೆ ಭರವಸೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Indian Oil Corporation has increased Auto LPG supply by nearly 300% in Bengaluru in response to disruptions in private supply chains caused by global geopolitical tensions. The move aims to meet rising demand and ensure uninterrupted fuel availability.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

7 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

15 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

15 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

17 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

24 hours ago