Advertisement
ಸುದ್ದಿಗಳು

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

Share

ಜಾಗತಿಕ ರಾಜಕೀಯ ಬಿಕ್ಕಟ್ಟಿನ ಪರಿಣಾಮವಾಗಿ ಖಾಸಗಿ ವಲಯದ ಆಟೋ LPG ಪೂರೈಕೆ ಸರಪಳಿಯಲ್ಲಿ ಉಂಟಾದ ವ್ಯತ್ಯಯದಿಂದ ತೀವ್ರ ಬೇಡಿಕೆ ನಿರ್ಮಾಣವಾಗಿದೆ. ಈ ಹಿನ್ನೆಲೆ ಸಾರ್ವಜನಿಕ ವಲಯದ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ (ಇಂಡಿಯನ್ ಆಯಿಲ್) ಪೂರೈಕೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯ ದಿನಗಳಲ್ಲಿ ಸುಮಾರು 23 ಮೆಟ್ರಿಕ್ ಟನ್ ಆಟೋ LPG ಪೂರೈಕೆ ನಡೆಯುತ್ತಿತ್ತು. ಆದರೆ, ನಿನ್ನೆ ಸಂಸ್ಥೆ ದಾಖಲೆಯ 75.53 ಮೆಟ್ರಿಕ್ ಟನ್ ಅನಿಲವನ್ನು ಪೂರೈಸಿ, ಪೂರೈಕೆಯನ್ನು ಸುಮಾರು 300% ಹೆಚ್ಚಿಸಿದೆ.

ಇದೇ ರೀತಿ ಕರ್ನಾಟಕದಾದ್ಯಂತ ದೈನಂದಿನ ಪೂರೈಕೆಯನ್ನು 43.5 ಮೆಟ್ರಿಕ್ ಟನ್ನಿನಿಂದ 83 ಮೆಟ್ರಿಕ್ ಟನ್ ಗಿಂತಲೂ ಹೆಚ್ಚು ಮಾಡುವ ಮೂಲಕ ಪೂರೈಕೆಯನ್ನು ದ್ವಿಗುಣಗೊಳಿಸಲಾಗಿದೆ.

ರಾಜ್ಯದ ಮಾರುಕಟ್ಟೆಯಲ್ಲಿ ಶೇ. 80 ರಷ್ಟು ಪಾಲನ್ನು ಹೊಂದಿರುವ ಖಾಸಗಿ ವಿತರಣಾ ಕೇಂದ್ರಗಳಲ್ಲಿ ಪೂರೈಕೆ ವ್ಯತ್ಯಯ ಉಂಟಾದದ್ದು ಈ ತೀವ್ರ ಬೇಡಿಕೆಗೆ ಪ್ರಮುಖ ಕಾರಣವಾಗಿದೆ.

ಇಂಡಿಯನ್ ಆಯಿಲ್ ಸಂಸ್ಥೆ ಆಟೋ LPG ಗ್ರಾಹಕರಿಗೆ ಉಂಟಾದ ಅನಾನುಕೂಲತೆಗಳನ್ನು ಗಮನಿಸಿ, ಅವರ ಪರಿಸ್ಥಿತಿಗೆ ಸಹಾನುಭೂತಿ ವ್ಯಕ್ತಪಡಿಸಿದೆ. ಸಾರ್ವಜನಿಕ ವಲಯದ ಸಂಸ್ಥೆಯಾಗಿ ತನ್ನ ಜವಾಬ್ದಾರಿಯನ್ನು ಮನಗಂಡು, ಗರಿಷ್ಠ ಮಟ್ಟದಲ್ಲಿ LPG ಲಭ್ಯತೆ ಖಚಿತಪಡಿಸುವುದಾಗಿ ಸಂಸ್ಥೆ ಭರವಸೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Indian Oil Corporation has increased Auto LPG supply by nearly 300% in Bengaluru in response to disruptions in private supply chains caused by global geopolitical tensions. The move aims to meet rising demand and ensure uninterrupted fuel availability.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

7 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago