Advertisement
ಸುದ್ದಿಗಳು

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

Share

ಜಾಗತಿಕ ರಾಜಕೀಯ ಬಿಕ್ಕಟ್ಟಿನ ಪರಿಣಾಮವಾಗಿ ಖಾಸಗಿ ವಲಯದ ಆಟೋ LPG ಪೂರೈಕೆ ಸರಪಳಿಯಲ್ಲಿ ಉಂಟಾದ ವ್ಯತ್ಯಯದಿಂದ ತೀವ್ರ ಬೇಡಿಕೆ ನಿರ್ಮಾಣವಾಗಿದೆ. ಈ ಹಿನ್ನೆಲೆ ಸಾರ್ವಜನಿಕ ವಲಯದ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ (ಇಂಡಿಯನ್ ಆಯಿಲ್) ಪೂರೈಕೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯ ದಿನಗಳಲ್ಲಿ ಸುಮಾರು 23 ಮೆಟ್ರಿಕ್ ಟನ್ ಆಟೋ LPG ಪೂರೈಕೆ ನಡೆಯುತ್ತಿತ್ತು. ಆದರೆ, ನಿನ್ನೆ ಸಂಸ್ಥೆ ದಾಖಲೆಯ 75.53 ಮೆಟ್ರಿಕ್ ಟನ್ ಅನಿಲವನ್ನು ಪೂರೈಸಿ, ಪೂರೈಕೆಯನ್ನು ಸುಮಾರು 300% ಹೆಚ್ಚಿಸಿದೆ.

ಇದೇ ರೀತಿ ಕರ್ನಾಟಕದಾದ್ಯಂತ ದೈನಂದಿನ ಪೂರೈಕೆಯನ್ನು 43.5 ಮೆಟ್ರಿಕ್ ಟನ್ನಿನಿಂದ 83 ಮೆಟ್ರಿಕ್ ಟನ್ ಗಿಂತಲೂ ಹೆಚ್ಚು ಮಾಡುವ ಮೂಲಕ ಪೂರೈಕೆಯನ್ನು ದ್ವಿಗುಣಗೊಳಿಸಲಾಗಿದೆ.

ರಾಜ್ಯದ ಮಾರುಕಟ್ಟೆಯಲ್ಲಿ ಶೇ. 80 ರಷ್ಟು ಪಾಲನ್ನು ಹೊಂದಿರುವ ಖಾಸಗಿ ವಿತರಣಾ ಕೇಂದ್ರಗಳಲ್ಲಿ ಪೂರೈಕೆ ವ್ಯತ್ಯಯ ಉಂಟಾದದ್ದು ಈ ತೀವ್ರ ಬೇಡಿಕೆಗೆ ಪ್ರಮುಖ ಕಾರಣವಾಗಿದೆ.

ಇಂಡಿಯನ್ ಆಯಿಲ್ ಸಂಸ್ಥೆ ಆಟೋ LPG ಗ್ರಾಹಕರಿಗೆ ಉಂಟಾದ ಅನಾನುಕೂಲತೆಗಳನ್ನು ಗಮನಿಸಿ, ಅವರ ಪರಿಸ್ಥಿತಿಗೆ ಸಹಾನುಭೂತಿ ವ್ಯಕ್ತಪಡಿಸಿದೆ. ಸಾರ್ವಜನಿಕ ವಲಯದ ಸಂಸ್ಥೆಯಾಗಿ ತನ್ನ ಜವಾಬ್ದಾರಿಯನ್ನು ಮನಗಂಡು, ಗರಿಷ್ಠ ಮಟ್ಟದಲ್ಲಿ LPG ಲಭ್ಯತೆ ಖಚಿತಪಡಿಸುವುದಾಗಿ ಸಂಸ್ಥೆ ಭರವಸೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Indian Oil Corporation has increased Auto LPG supply by nearly 300% in Bengaluru in response to disruptions in private supply chains caused by global geopolitical tensions. The move aims to meet rising demand and ensure uninterrupted fuel availability.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

5 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

10 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

21 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

22 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

23 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

23 hours ago