ಆಟೊ ಬಿಡಿ ಭಾಗ ತಯಾರಿಕಾ ಘಟಕಗಳು ದೇಶದ ಜಿಡಿಪಿಗೆ ಶೇಕಡ 2.7 ರಷ್ಟು ಕೊಡುಗೆ ನೀಡುತ್ತಿವೆ. ಸರಿ ಸುಮಾರು 50 ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ನೀಡಿವೆ ಎಂದು ಕೇಂದ್ರ ಭಾರಿ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈಗ ಆಟೊ ಬಿಡಿಭಾಗಗಳ ಮೇಲೆ ಇತರ ದೇಶಗಳ ಮೇಲಿನ ಅವಲಂಬನೆ ಕಡಿಮೆ ಮಾಡಿಕೊಳ್ಳಬೇಕು ಎಂದು ಆಟೋ ಉದ್ಯಮಕ್ಕೆ ಅವರು ಸಲಹೆ ನೀಡಿದರು. ಪ್ರಧಾನಮಂತ್ರಿಗಳ ಆತ್ಮನಿರ್ಭರ ಭಾರತ್ ಮತ್ತು ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳನ್ನು ಸಾಕಾರ ಮಾಡುವ ಜೊತೆ ಜೊತೆಗೆ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಗುರಿ ಮುಟ್ಟಲು ಆಟೊ ಬಿಡಿ ಭಾಗಗಳ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕಾಗಿದೆ ಎಂದರು. ಜಾಗತಿಕ ಮಟ್ಟದಲ್ಲಿ ದೇಶೀಯ ಆಟೊ ಬಿಡಿಭಾಗ ಉದ್ಯಮ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ದುಬಾರಿ ಸಾರಿಗೆ, ವೆಚ್ಚಗಳ ಒತ್ತಡಕ್ಕೆ ಸಿಲುಕಿದೆ. ಇಷ್ಟಾದರೂ ಪ್ರಸಕ್ತ ಹಣಕಾಸು ವರ್ಷದಲ್ಲಿ ರಫ್ತು ವಹಿವಾಟು ಕಂಡಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…