Advertisement
MIRROR FOCUS

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

Share

ಧಾರವಾಡ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕೃಷಿ ಹವಾಮಾನ ವೀಕ್ಷಣಾಲಯದಲ್ಲಿ ನೂತನವಾಗಿ ಸ್ವಯಂಚಾಲಿತ ಹವಾಮಾನ ಕೇಂದ್ರ (AWS) ಆರಂಭಿಸಲಾಗಿದೆ.

ಈ ಕುರಿತು ಉತ್ತರ ಕರ್ನಾಟಕ ಕೃಷಿ ಹವಾಮಾನ ಮುನ್ಸೂಚನೆ ಹಾಗೂ ಸಂಶೋಧನಾ ಕೇಂದ್ರದ ಉಸ್ತುವಾರಿ ಅಧಿಕಾರಿ ಡಾ. ರಾಜು ರೋಖಡೆ ಮಾಹಿತಿ ನೀಡಿದ್ದು, ಈ ಕೇಂದ್ರದಿಂದ ರೈತರಿಗೆ ನಿಖರ ಹಾಗೂ ತ್ವರಿತ ಹವಾಮಾನ ಮಾಹಿತಿ ಲಭ್ಯವಾಗಲಿದೆ ಎಂದರು. ಭಾರತೀಯ ಹವಾಮಾನ ಇಲಾಖೆ ದೇಶಾದ್ಯಂತ ಸ್ಥಾಪಿಸಿರುವ 700 ಕೇಂದ್ರಗಳಲ್ಲಿ ಇದು ಒಂದಾಗಿದ್ದು, ಸುಮಾರು ₹25 ಲಕ್ಷ ವೆಚ್ಚದಲ್ಲಿ ಈ ನೂತನ ತಂತ್ರಜ್ಞಾನದ ಕೇಂದ್ರವನ್ನು ನಿರ್ಮಿಸಲಾಗಿದೆ.

ಪ್ರಸ್ತುತ ವೀಕ್ಷಣಾಲಯದಲ್ಲಿ ವಿವಿಧ ಸಾಧನಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿದ್ದವು. ಮಳೆ ಮಾಪಕ (Rain Gauge), ಗಾಳಿಯ ವೇಗ ಮಾಪಕ (Anemometer), ಗಾಳಿಯ ದಿಕ್ಕೂಚಿ (Wind Vane), ಕನಿಷ್ಠ-ಗರಿಷ್ಠ ಉಷ್ಣತೆ ಮಾಪಕ (Stevenson Screen), ಬಿಸಿಲು ಅವಧಿ ಮಾಪಕ, ನೀರಿನ ಆವಿ ಮಾಪಕ ಈ ಎಲ್ಲಾ ಮಾಹಿತಿಯನ್ನು ವೀಕ್ಷಕರು ಪ್ರತ್ಯೇಕವಾಗಿ ಸಂಗ್ರಹಿಸಬೇಕಾಗುತ್ತಿತ್ತು. ಆದರೆ ಈಗ, ಸೆನ್ಸರ್ ಆಧಾರಿತ ಸ್ವಯಂಚಾಲಿತ ಕೇಂದ್ರದಿಂದ ಪ್ರತಿ ಗಂಟೆಗೆ ಎಲ್ಲ ಮಾಹಿತಿಯೂ ಸ್ವಯಂಚಾಲಿತವಾಗಿ ಅಪ್ಲೋಡ್ ಆಗುತ್ತದೆ.

ಈ ಕೇಂದ್ರದಿಂದ ಪ್ರಮುಖ ಮಾಹಿತಿ ಲಭ್ಯವಾಗಲಿದೆ. ಉಷ್ಣತೆ, ಮಳೆ ಪ್ರಮಾಣ, ಗಾಳಿಯ ವೇಗ, ವಾಯುಭಾರ ಮತ್ತು ಮಣ್ಣಿನ ತೇವಾಂಶ ಕುರಿತ ಮಾಹಿತಿಯು ರೈತರಿಗೆ ಬೆಳೆ ಬೆಳೆಯಲು ಪೂರಕವಾಗಲಿದೆ.  ಬೆಳೆ ಯೋಜನೆ ಸುಲಭವಾಗುತ್ತದೆ, ನೀರಿನ ಬಳಕೆ ಸಮರ್ಪಕವಾಗಿ ಮಾಡಬಹುದು, ಗೊಬ್ಬರ ಬಳಕೆ ವೈಜ್ಞಾನಿಕವಾಗಿ ನಿರ್ಧರಿಸಬಹುದು, ಹವಾಮಾನ ಆಧಾರಿತ ಕೃಷಿ ನಿರ್ವಹಣೆ ಸಾಧ್ಯ.

ಈ ಸ್ವಯಂಚಾಲಿತ ಹವಾಮಾನ ಕೇಂದ್ರದಿಂದ ದೊರೆಯುವ ದತ್ತಾಂಶವು. ಮಳೆ, ಗಾಳಿ, ಬಿಸಿಲಿನ ತೀವ್ರತೆ ಬಗ್ಗೆ ಮುನ್ನೆಚ್ಚರಿಕೆ ನೀಡುತ್ತದೆ. ಪ್ರಕೃತಿ ವಿಕೋಪಗಳ ಮುಂಚಿತ ಸಿದ್ಧತೆಗೆ ಸಹಾಯವಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

An Automatic Weather Station (AWS) has been launched at the Agricultural University in Dharwad, enabling real-time and accurate weather data collection. This will help farmers make informed decisions on crop planning, irrigation, and fertilizer usage while also aiding disaster preparedness.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

1 hour ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

7 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

8 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

21 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago