Advertisement
MIRROR FOCUS

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

Share

ಧಾರವಾಡ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕೃಷಿ ಹವಾಮಾನ ವೀಕ್ಷಣಾಲಯದಲ್ಲಿ ನೂತನವಾಗಿ ಸ್ವಯಂಚಾಲಿತ ಹವಾಮಾನ ಕೇಂದ್ರ (AWS) ಆರಂಭಿಸಲಾಗಿದೆ.

ಈ ಕುರಿತು ಉತ್ತರ ಕರ್ನಾಟಕ ಕೃಷಿ ಹವಾಮಾನ ಮುನ್ಸೂಚನೆ ಹಾಗೂ ಸಂಶೋಧನಾ ಕೇಂದ್ರದ ಉಸ್ತುವಾರಿ ಅಧಿಕಾರಿ ಡಾ. ರಾಜು ರೋಖಡೆ ಮಾಹಿತಿ ನೀಡಿದ್ದು, ಈ ಕೇಂದ್ರದಿಂದ ರೈತರಿಗೆ ನಿಖರ ಹಾಗೂ ತ್ವರಿತ ಹವಾಮಾನ ಮಾಹಿತಿ ಲಭ್ಯವಾಗಲಿದೆ ಎಂದರು. ಭಾರತೀಯ ಹವಾಮಾನ ಇಲಾಖೆ ದೇಶಾದ್ಯಂತ ಸ್ಥಾಪಿಸಿರುವ 700 ಕೇಂದ್ರಗಳಲ್ಲಿ ಇದು ಒಂದಾಗಿದ್ದು, ಸುಮಾರು ₹25 ಲಕ್ಷ ವೆಚ್ಚದಲ್ಲಿ ಈ ನೂತನ ತಂತ್ರಜ್ಞಾನದ ಕೇಂದ್ರವನ್ನು ನಿರ್ಮಿಸಲಾಗಿದೆ.

ಪ್ರಸ್ತುತ ವೀಕ್ಷಣಾಲಯದಲ್ಲಿ ವಿವಿಧ ಸಾಧನಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿದ್ದವು. ಮಳೆ ಮಾಪಕ (Rain Gauge), ಗಾಳಿಯ ವೇಗ ಮಾಪಕ (Anemometer), ಗಾಳಿಯ ದಿಕ್ಕೂಚಿ (Wind Vane), ಕನಿಷ್ಠ-ಗರಿಷ್ಠ ಉಷ್ಣತೆ ಮಾಪಕ (Stevenson Screen), ಬಿಸಿಲು ಅವಧಿ ಮಾಪಕ, ನೀರಿನ ಆವಿ ಮಾಪಕ ಈ ಎಲ್ಲಾ ಮಾಹಿತಿಯನ್ನು ವೀಕ್ಷಕರು ಪ್ರತ್ಯೇಕವಾಗಿ ಸಂಗ್ರಹಿಸಬೇಕಾಗುತ್ತಿತ್ತು. ಆದರೆ ಈಗ, ಸೆನ್ಸರ್ ಆಧಾರಿತ ಸ್ವಯಂಚಾಲಿತ ಕೇಂದ್ರದಿಂದ ಪ್ರತಿ ಗಂಟೆಗೆ ಎಲ್ಲ ಮಾಹಿತಿಯೂ ಸ್ವಯಂಚಾಲಿತವಾಗಿ ಅಪ್ಲೋಡ್ ಆಗುತ್ತದೆ.

ಈ ಕೇಂದ್ರದಿಂದ ಪ್ರಮುಖ ಮಾಹಿತಿ ಲಭ್ಯವಾಗಲಿದೆ. ಉಷ್ಣತೆ, ಮಳೆ ಪ್ರಮಾಣ, ಗಾಳಿಯ ವೇಗ, ವಾಯುಭಾರ ಮತ್ತು ಮಣ್ಣಿನ ತೇವಾಂಶ ಕುರಿತ ಮಾಹಿತಿಯು ರೈತರಿಗೆ ಬೆಳೆ ಬೆಳೆಯಲು ಪೂರಕವಾಗಲಿದೆ.  ಬೆಳೆ ಯೋಜನೆ ಸುಲಭವಾಗುತ್ತದೆ, ನೀರಿನ ಬಳಕೆ ಸಮರ್ಪಕವಾಗಿ ಮಾಡಬಹುದು, ಗೊಬ್ಬರ ಬಳಕೆ ವೈಜ್ಞಾನಿಕವಾಗಿ ನಿರ್ಧರಿಸಬಹುದು, ಹವಾಮಾನ ಆಧಾರಿತ ಕೃಷಿ ನಿರ್ವಹಣೆ ಸಾಧ್ಯ.

ಈ ಸ್ವಯಂಚಾಲಿತ ಹವಾಮಾನ ಕೇಂದ್ರದಿಂದ ದೊರೆಯುವ ದತ್ತಾಂಶವು. ಮಳೆ, ಗಾಳಿ, ಬಿಸಿಲಿನ ತೀವ್ರತೆ ಬಗ್ಗೆ ಮುನ್ನೆಚ್ಚರಿಕೆ ನೀಡುತ್ತದೆ. ಪ್ರಕೃತಿ ವಿಕೋಪಗಳ ಮುಂಚಿತ ಸಿದ್ಧತೆಗೆ ಸಹಾಯವಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

An Automatic Weather Station (AWS) has been launched at the Agricultural University in Dharwad, enabling real-time and accurate weather data collection. This will help farmers make informed decisions on crop planning, irrigation, and fertilizer usage while also aiding disaster preparedness.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

16 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

23 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

24 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

24 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago