Advertisement
MIRROR FOCUS

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

Share

ಧಾರವಾಡ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕೃಷಿ ಹವಾಮಾನ ವೀಕ್ಷಣಾಲಯದಲ್ಲಿ ನೂತನವಾಗಿ ಸ್ವಯಂಚಾಲಿತ ಹವಾಮಾನ ಕೇಂದ್ರ (AWS) ಆರಂಭಿಸಲಾಗಿದೆ.

ಈ ಕುರಿತು ಉತ್ತರ ಕರ್ನಾಟಕ ಕೃಷಿ ಹವಾಮಾನ ಮುನ್ಸೂಚನೆ ಹಾಗೂ ಸಂಶೋಧನಾ ಕೇಂದ್ರದ ಉಸ್ತುವಾರಿ ಅಧಿಕಾರಿ ಡಾ. ರಾಜು ರೋಖಡೆ ಮಾಹಿತಿ ನೀಡಿದ್ದು, ಈ ಕೇಂದ್ರದಿಂದ ರೈತರಿಗೆ ನಿಖರ ಹಾಗೂ ತ್ವರಿತ ಹವಾಮಾನ ಮಾಹಿತಿ ಲಭ್ಯವಾಗಲಿದೆ ಎಂದರು. ಭಾರತೀಯ ಹವಾಮಾನ ಇಲಾಖೆ ದೇಶಾದ್ಯಂತ ಸ್ಥಾಪಿಸಿರುವ 700 ಕೇಂದ್ರಗಳಲ್ಲಿ ಇದು ಒಂದಾಗಿದ್ದು, ಸುಮಾರು ₹25 ಲಕ್ಷ ವೆಚ್ಚದಲ್ಲಿ ಈ ನೂತನ ತಂತ್ರಜ್ಞಾನದ ಕೇಂದ್ರವನ್ನು ನಿರ್ಮಿಸಲಾಗಿದೆ.

ಪ್ರಸ್ತುತ ವೀಕ್ಷಣಾಲಯದಲ್ಲಿ ವಿವಿಧ ಸಾಧನಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿದ್ದವು. ಮಳೆ ಮಾಪಕ (Rain Gauge), ಗಾಳಿಯ ವೇಗ ಮಾಪಕ (Anemometer), ಗಾಳಿಯ ದಿಕ್ಕೂಚಿ (Wind Vane), ಕನಿಷ್ಠ-ಗರಿಷ್ಠ ಉಷ್ಣತೆ ಮಾಪಕ (Stevenson Screen), ಬಿಸಿಲು ಅವಧಿ ಮಾಪಕ, ನೀರಿನ ಆವಿ ಮಾಪಕ ಈ ಎಲ್ಲಾ ಮಾಹಿತಿಯನ್ನು ವೀಕ್ಷಕರು ಪ್ರತ್ಯೇಕವಾಗಿ ಸಂಗ್ರಹಿಸಬೇಕಾಗುತ್ತಿತ್ತು. ಆದರೆ ಈಗ, ಸೆನ್ಸರ್ ಆಧಾರಿತ ಸ್ವಯಂಚಾಲಿತ ಕೇಂದ್ರದಿಂದ ಪ್ರತಿ ಗಂಟೆಗೆ ಎಲ್ಲ ಮಾಹಿತಿಯೂ ಸ್ವಯಂಚಾಲಿತವಾಗಿ ಅಪ್ಲೋಡ್ ಆಗುತ್ತದೆ.

ಈ ಕೇಂದ್ರದಿಂದ ಪ್ರಮುಖ ಮಾಹಿತಿ ಲಭ್ಯವಾಗಲಿದೆ. ಉಷ್ಣತೆ, ಮಳೆ ಪ್ರಮಾಣ, ಗಾಳಿಯ ವೇಗ, ವಾಯುಭಾರ ಮತ್ತು ಮಣ್ಣಿನ ತೇವಾಂಶ ಕುರಿತ ಮಾಹಿತಿಯು ರೈತರಿಗೆ ಬೆಳೆ ಬೆಳೆಯಲು ಪೂರಕವಾಗಲಿದೆ.  ಬೆಳೆ ಯೋಜನೆ ಸುಲಭವಾಗುತ್ತದೆ, ನೀರಿನ ಬಳಕೆ ಸಮರ್ಪಕವಾಗಿ ಮಾಡಬಹುದು, ಗೊಬ್ಬರ ಬಳಕೆ ವೈಜ್ಞಾನಿಕವಾಗಿ ನಿರ್ಧರಿಸಬಹುದು, ಹವಾಮಾನ ಆಧಾರಿತ ಕೃಷಿ ನಿರ್ವಹಣೆ ಸಾಧ್ಯ.

ಈ ಸ್ವಯಂಚಾಲಿತ ಹವಾಮಾನ ಕೇಂದ್ರದಿಂದ ದೊರೆಯುವ ದತ್ತಾಂಶವು. ಮಳೆ, ಗಾಳಿ, ಬಿಸಿಲಿನ ತೀವ್ರತೆ ಬಗ್ಗೆ ಮುನ್ನೆಚ್ಚರಿಕೆ ನೀಡುತ್ತದೆ. ಪ್ರಕೃತಿ ವಿಕೋಪಗಳ ಮುಂಚಿತ ಸಿದ್ಧತೆಗೆ ಸಹಾಯವಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

An Automatic Weather Station (AWS) has been launched at the Agricultural University in Dharwad, enabling real-time and accurate weather data collection. This will help farmers make informed decisions on crop planning, irrigation, and fertilizer usage while also aiding disaster preparedness.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

10 minutes ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

8 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

12 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

17 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

23 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago